ಉಸ್ತುವಾರಿ ಸಚಿವರ ಪ್ರವಾಸ

Update: 2016-05-26 18:25 GMT

ಮಂಗಳೂರು, ಮೇ 26: ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಮೇ 27ರಂದು ಬೆಳಗ್ಗೆ 9 ಗಂಟೆಗೆ ಸಸಿಹಿತ್ಲು ಬೀಚ್‌ನಲ್ಲಿ ದ.ಕ. ಜಿಲ್ಲಾಡಳಿತದ ವತಿಯಿಂದ ನಡೆಯುವ ಇಂಡಿಯನ್ ಓಪನ್ ಆ್ ಸರ್ಫಿಂಗ್-2016 ಇದರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು. ಮಧ್ಯಾಹ್ನ 12:30ಕ್ಕೆ ಸಾಲೆತ್ತೂರಿನಲ್ಲಿ ಜರಗುವ ದಿ.ರಾಮ ಮಲಾರು ಇವರ ಸಾರ್ವಜನಿಕ ಶ್ರದ್ದಾಂಜಲಿ ಸಭೆಯಲ್ಲಿ ಭಾಗವಹಿಸುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News