ಸುಳ್ಯ : ತೋಟಗಾರಿಕೆಯಿಂದ ರೈತರಿಗೆ ಮಾಹಿತಿ ಕಾರ್ಯಕ್ರಮ

Update: 2016-05-27 10:00 GMT

ಸುಳ್ಯ, ಮೇ 27: ತೋಟಗಾರಿಕೆ ಇಲಾಖೆ ಸುಳ್ಯ ಇದರ ವತಿಯಿಂದ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ ತೋಟಗಾರಿಕೆ ಬೆಳೆಗಳ ಹೊಸತೋಟ ನಿರ್ಮಾಣ, ನಿರ್ವಹಣೆ ಹಾಗೂ ಬೋರ್ಡೋ ಮಿಶ್ರಣ ತಯಾರಿ ಬಗ್ಗೆ ರೈತರಿಗೆ ಮಾಹಿತಿ ಕಾರ್ಯಕ್ರಮ ಸುಳ್ಯ ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

  ಅಧ್ಯಕ್ಷತೆಯನ್ನು ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ ವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ತಾಲೂಕು ಪಂ. ಉಪಾಧ್ಯಕ್ಷೆ ಸುಭದಾ ಎಸ್.ರೈ, ತೋಟಗಾರಿಕಾ ಉಪನಿರ್ದೇಶಕ ಯೋಗೇಶ್ ಎಚ್.ಆರ್, ತಾಲೂಕು ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಮಧುಕುಮಾರ್, ತಾಲೂಕು ಪಂ. ಸದಸ್ಯ ಉದಯಕುಮಾರ್ ಕೊಪ್ಪಡ್ಕ ಭಾಗವಹಿಸಿದರು.

ಸಂಪನ್ಮೂಲ ವ್ಯಕ್ತಿಯಾಗಿ ಸಿ.ಪಿ.ಸಿ.ಆರ್.ಐ ವಿಟ್ಲ ಇದರ ವಿಷಯ ತಜ್ಞ ಪುರಂದರ ಹಾಗೂ ತಾಲೂಕು ಪಂ.ನ ಭವಾನಿ ಶಂಕರ ಭಾಗವಹಿಸಿದರು. ರೇಷ್ಮೆ ಇಲಾಖಾಧಿಕಾರಿ ವೀರಪ್ಪ ಗೌಡ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News