ಅಂಧ ಯುವಕನ ಕುಟುಂಬಕ್ಕೆ ಮನೆ ಹಸ್ತಾಂತರ

Update: 2016-05-31 06:38 GMT

ಮಂಗಳೂರು, ಮೇ 31: ಜಮೀಯತುಲ್ ಫಲಾಹ್ ಮಂಗಳೂರು ನಗರ ಘಟಕದ ವಸತಿ ಯೋಜನೆಯಡಿ ಸೈಯದ್ ಹಾಜಿ ಕರ್ನಿರೆ ಚಾರಿಟೇಬಲ್ ಟ್ರಸ್ಟ್ ಸಹಯೋಗದೊಂದಿಗೆ ಬಂಟ್ವಾಳ ತಾಲೂಕಿನ ಕರೋಪಾಡಿ ಗ್ರಾಮದ ವಿಜಯಡ್ಕದ ಅಂಧ ಯುವಕ ಅಬೂಬಕರ್ ಸಿದ್ದೀಕ್ ಎಂಬವರ ಕುಟುಂಬಕ್ಕಾಗಿ ನಿರ್ಮಿಸಿರುವ ಮನೆಯ ಹಸ್ತಾಂತರ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.

ಜಮೀಯತುಲ್ ಫಲಾಹ್ ಜಿಲ್ಲಾಧ್ಯಕ್ಷ ಹಾಜಿ ಅಬ್ದುಲ್ಲತೀಫ್ ಸಾಹೇಬ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಆರ್‌ಸಿಸಿ ಮನೆಯ ಕೀಲಿಕೈಯನ್ನು ಸೈಯದ್ ಹಾಜಿ ಕರ್ನಿರೆ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಹಾಜಿ ಸೈಯದ್ ಕರ್ನಿರೆಯವರು ಅಬೂಬಕರ್ ಸಿದ್ದೀಕ್‌ರಿಗೆ ಹಸ್ತಾಂತರಿಸಿದರು.

ಮುಖ್ಯ ಅತಿಥಿಗಳಾಗಿ ಮುಡಾ ಅಧ್ಯಕ್ಷ ಇಬ್ರಾಹೀಂ ಕೋಡಿಜಾಲ್, ಜಿಪಂ ಸದಸ್ಯ ಎಂ.ಎಸ್.ಮುಹಮ್ಮದ್, ಪಂಚಾಯತ್ ಅಧ್ಯಕ್ಷ ಬೇಬಿ ಆರ್. ಶೆಟ್ಟಿ, ಉಪಾಧ್ಯಕ್ಷ ಜಲೀಲ್ ಕರೋಪಾಡಿ ಮತ್ತಿತರರು ಉಪಸ್ಥಿತರಿದ್ದರು.

ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಜಮೀಯತುಲ್ ಫಲಾಹ್ ನಗರ ಘಟಕಾಧ್ಯಕ್ಷ ಅಬ್ದುಲ್ ಅಝೀಝ್ ಅಡ್ವೋಕೇಟ್, ಕರ್ನಿರೆಯವರ ಸಮಾಜಮುಖ ಕಾರ್ಯಕ್ರಮಗಳನ್ನು ಶ್ಲಾಘಿಸಿದರು.

ಜಮೀಯತುಲ್ ಫಲಾಹ್ ನಗರ ಘಟಕದ ಪತ್ರಿಕಾ ಕಾರ್ಯದರ್ಶಿ ನಝೀರ್ ಕಾರ್ಯಕ್ರಮ ನಿರ್ವಹಿಸಿದರು. ಕಾರ್ಯದರ್ಶಿ ಸುಬೇರ್ ಶಾ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News