ಗೃಹಸಚಿವ ಡಾ.ಪರಮೇಶ್ವರ್ ವಿರುದ್ಧ ರಿಟ್ ಅರ್ಜಿ

Update: 2016-05-31 09:03 GMT

ಬೆಂಗಳೂರು, ಮೇ 31: ರಾಜ್ಯ ಗೃಹಸಚಿವ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ವಿರುದ್ಧ ರಿಟ್ ಅರ್ಜಿಯೊಂದು ಹೈಕೋರ್ಟ್‌ನಲ್ಲಿ ದಾಖಲಾಗಿದೆ. ಡಾ.ಜಿ.ಪರಮೇಶ್ವರ್ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನ, ಸಿದ್ಧಾರ್ಥ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಹಾಗೂ ಸರಕಾರದ ಗೃಹ ಸಚಿವ ಸ್ಥಾನವನ್ನು ಹೊಂದಿದ್ದಾರೆ. ಈ ಕಾರಣಕ್ಕೆ ಲಾಭದಾಯಕ ಹುದ್ದೆಗಳ ಆರೋಪ ಹೊರಿಸಿ ಅವರ ಸಚಿವ ಸ್ಥಾನದ ಅನರ್ಹತೆ ಕೋರಿ ಬೆಂಗಳೂರಿನ ಶಶಿಧರ್ ಎಂಬವರು ಹೈಕೋಟ್‌ನಲ್ಲಿ ರಿಟ್ ಅರ್ಜಿ ಸಲ್ಲಿಸಿದ್ದಾರೆ. ರಿಟ್ ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ಈ ಬಗ್ಗೆ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ ಎಂದು ತಿಳಿದುಬಂದಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News