ಹೇಮನಾಥ ಶೆಟ್ಟಿಯನ್ನು ಕಾಂಗ್ರೆಸ್‌ನಿಂದ ಉಚ್ಛಾಟಿಸಲು ಕೆ.ಎಸ್. ಮುಹಮ್ಮದ್ ಮಸೂದ್ ಆಗ್ರಹ

Update: 2016-06-11 10:14 GMT

ಮಂಗಳೂರು,ಜೂ.11: ಕಾಂಗ್ರೆಸ್‌ನ ಹಿರಿಯ ನಾಯಕ, ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರನ್ನು ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಹೇಮನಾಥ ಶೆಟ್ಟಿ ಟೀಕಿಸುತ್ತಿರುವುದು ಖಂಡನೀಯವಾಗಿದ್ದು, ಅವರ ವಿರುದ್ಧ ಶಿಸ್ತು ಕ್ರಮ ತೆಗೆದುಕೊಂಡು ಪಕ್ಷದಿಂದ ಉಚ್ಛಾಟಿಸಬೇಕು ಎಂದು ಕರ್ನಾಟಕ ಅಲ್ಪಸಂಖ್ಯಾತ ಆಯೋಗದ ಮಾಜಿ ಅಧ್ಯಕ್ಷ ಅಲ್‌ಹಾಜ್ ಕೆ.ಎಸ್. ಮುಹಮ್ಮದ್ ಮಸೂದ್ ಆಗ್ರಹಿಸಿದ್ದಾರೆ.

ಪೂಜಾರಿಯವರು ಹಲವು ವರ್ಷಗಳಿಂದ ಪಕ್ಷದ ನಿಷ್ಠಾವಂತ ನಾಯಕರಾಗಿದ್ದು, ಜನತೆಯ ಎಲ್ಲಾ ವಿಧದ ಕಷ್ಟ ನಷ್ಟಗಳಿಗೆ ಸ್ಪಂದಿಸಿದವರು. ಅವರ ಪ್ರಾಮಾಣಿಕತೆ ಬಗ್ಗೆ ದ.ಕ. ಜಿಲ್ಲೆಯ ಜನತೆಗೆ ತಿಳಿದ ವಿಷಯ.

ಅಂತಹ ನಾಯಕರನ್ನು ಕೆಲವರ ಸಿಂಪತಿಗಾಗಿ ಹಾಗೂ ತನ್ನ ಸ್ವಂತ ಹಿತಾಸಕ್ತಿಗಾಗಿ ಪುತ್ತೂರು ಬ್ಲಾಕ್ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷರು ಟೀಕಿಸುತ್ತಿರುವುದು ಖಂಡನೀಯ ಎಂದು ಮುಹಮ್ಮದ್ ಮಸೂದ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News