×
Ad

ಅಲ್ಪಸಂಖ್ಯಾತರ ನಿಗಮದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

Update: 2016-06-17 23:38 IST

ಬೆಂಗಳೂರು, ಜೂ. 17: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಿಂದ ಪ್ರಸಕ್ತ ಸಾಲಿಗೆ ಬೆಂಗಳೂರು ನಗರ ಜಿಲ್ಲೆಯ (ಕೇಂದ್ರೀಯ, ದಕ್ಷಿಣ ವಿಭಾಗ) ನಿಗಮದ ಸಾಲದ ಯೋಜನೆಗಳಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ (ಮುಸ್ಲಿಂ, ಕ್ರೈಸ್ತ, ಸಿಖ್ಖರು, ಜೈನ್, ಬೌದ್ಧ ಮತ್ತು ಪಾರ್ಸಿ) ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರಿವು (ವಿದ್ಯಾಭ್ಯಾಸ ಸಾಲ), ಶ್ರಮಶಕ್ತಿ, ಕ್ರೈಸ್ತ ಸಮುದಾಯದ ಅಭಿವದ್ಧಿ ಯೋಜನೆಗಳು, ಸಣ್ಣ (ಮೈಕ್ರೋ) ಸಾಲ ಮತ್ತು ಸಹಾಯಧನ, ಸ್ವಾವಲಂಬನಾ ಮಾರ್ಜಿನ್ ಹಣ ಸಾಲ ಮತ್ತು ಸಹಾಯಧನ ಯೋಜನೆಯಡಿ ಸಾಲ ಸೌಲಭ್ಯ ಕಲ್ಪಿಸಲಾಗುವುದು.
ಅರ್ಹತೆ: ನಿಗಮದ ಎಲ್ಲ ಯೋಜನೆಗಳಲ್ಲಿ ಶೇ.80ರಷ್ಟು ಮುಸ್ಲಿಂ, ಶೇ.10ರಷ್ಟು ಕ್ರೈಸ್ತರು ಹಾಗೂ ಶೇ.10ರಷ್ಟು ಇತರೆ (ಜೈನರು, ಬೌದ್ಧರು, ಸಿಖ್ಖರು ಮತ್ತು ಪಾರ್ಸಿ ಜನಾಂಗದವರಿಗೆ ಸಾಲ ಸೌಲಭ್ಯವನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ.
ಎಲ್ಲ್ಲ ಯೋಜನೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಆದ್ಯತೆ ನೀಡಲಾಗುವುದು. ಎಲ್ಲ ಯೋಜನೆಗಳಲ್ಲಿ ಅಂಗವಿಕಲರಿಗೆ ಹಾಗೂ ಮಾಜಿ ಸೈನಿಕರಿಗೆ ಶೇ.3ರಷ್ಟು ಗುರಿಯನ್ನು ಆದ್ಯತೆ ಒದಗಿಸಲಾಗುವುದು. ಆರ್ಥಿಕ ನೆರವು ಪಡೆಯಲಿಚ್ಛಿಸುವ ಅರ್ಜಿದಾರರು ಸರಕಾರವು ಅಂಗೀಕರಿಸಿದ ಅಲ್ಪಸಂಖ್ಯಾತ ವರ್ಗಗಳ ಪ್ರವರ್ಗ-1, ಪ್ರವರ್ಗ-2, 2‘ಬಿ’, 3ಎ, ಮತ್ತು 3ಬಿ ಗುಂಪಿಗೆ ಸೇರಿದವರಾಗಿರಬೇಕು.
 ಅರ್ಜಿದಾರರ ಕುಟುಂಬದ ವಾರ್ಷಿಕ ಆದಾಯ 1.03 ಲಕ್ಷ ರೂ.ಮೀರಿರಬಾರದು ಅರ್ಜಿದಾರರು ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15ವರ್ಷಗಳಿಂದ ವಾಸವಾಗಿರಬೇಕು. ಅರ್ಜಿದಾರರ ವಯಸ್ಸು ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 55ವರ್ಷಗಳು.
ಅರ್ಜಿದಾರರು ತಮ್ಮ ವಿಳಾಸದ ದೃಢೀಕರಣಕ್ಕಾಗಿ ಆಧಾರ್ ಪ್ರತಿಯನ್ನು ಲಗತ್ತಿಸಿ, ಅದನ್ನು ಅವರ ಬ್ಯಾಂಕ್ ಖಾತೆಗೆ ಹೊಂದಾಣಿಕೆ ಮಾಡಿರಬೇಕು ಮತ್ತು ಇತರೆ ಮಾನ್ಯವಾಗಿರುವ ದಾಖಲಾತಿಗಳನ್ನು ಲಗತ್ತಿಸಬೇಕು. ಅರ್ಜಿದಾರರು ಖುದ್ದಾಗಿ ಬಂದು ಅರ್ಜಿಯನ್ನು ಸಲ್ಲಿಸುವುದು, ಅರ್ಜಿದಾರರಿಂದ ಒಂದೇ ಅರ್ಜಿಯನ್ನು ಸ್ವೀಕರಿಸಲಾಗುವುದು.
ಸಾಲದ ಅರ್ಜಿ ನಮೂನೆಯನ್ನು ನಿಗಮದ ವೆಬ್‌ಸೈಬ್ ಡಿಡಿಡಿ.ಞಛ್ಚ.ಚ್ಟ.್ಞಜ್ಚಿ.ಜ್ಞಿ ಅಥವಾ ಞಛ್ಚ.ಚ್ಟ್ಞಠಿ.ಜಟ.ಜ್ಞಿ ಮೂಲಕ ಪಡೆಯಬಹುದು.
ಸಾಲದ ಅರ್ಜಿಯನ್ನು ಜೂ.30ರೊಳಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ, ಹಮೀದ್ ಷಾ ಕಾಂಪ್ಲೆಕ್ಸ್, 2ನೆ ಮಹಡಿ, ಎಸ್‌ಎಫ್ 2, ಹಲಸೂರು ಗೇಟ್ ಪೊಲೀಸ್ ಸ್ಟೇಷನ್ ಹಿಂಭಾಗ, ಕಬ್ಬನ್ ಪೇಟೆ ಮುಖ್ಯ ರಸ್ತೆ, ಬೆಂಗಳೂರು ನಗರ ಜಿಲ್ಲೆ ಇವರಿಗೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ದೂ.ಸಂಖ್ಯೆ-080-2211 4815, 2211 4817 ನ್ನು ಸಂಪರ್ಕಿಸಬಹುದು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News