ಬಂಟ್ವಾಳ: ಶಂಕಿತ ಡೆಂಗ್‌ಗೆ ಯುವಕ ಬಲಿ

Update: 2016-06-19 15:29 GMT

ಬಂಟ್ವಾಳ, ಜೂ.19: ಶಂಕಿತ ಡೆಂಗ್ ಜ್ವರಕ್ಕೆ ಯುವಕನೋರ್ವ ಬಲಿಯಾದ ಘಟನೆ ಬಂಟ್ವಾಳ ತಾಲೂಕಿನ ವಾಮದಪದವಿನ ಕೆಂಚನೂರು ಎಂಬಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಚಂದ್ರಶೇಖರ ಶೆಟ್ಟಿ(25) ಮೃತಪಟ್ಟವರು. ತೀವ್ರ ಜ್ವರದಿಂದ ಬಳಲುತ್ತಿದ್ದ ಇವರನ್ನು ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ರಾತ್ರಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.

ಬಂಟ್ವಾಳ ತಾಲೂಕಿನಾದ್ಯಂತ ಬೇಸಿಗೆಯಲ್ಲಿಯೇ ಸುಮಾರು 70 ಶಂಕಿತ ಡೆಂಗ್ ಪ್ರಕರಣಗಳು ಪತ್ತೆಯಾಗಿದ್ದವು. ಮಳೆಗಾಲ ಆರಂಭವಾದ ಮೇಲಂತೂ ತಾಲೂಕಿನಲ್ಲಿ ಶಂಕಿತ ಡೆಂಗ್ ಜ್ವರ ಪೀಡಿತರ ಸಂಖ್ಯೆ ದಿನೆ ದಿನೆ ಹೆಚ್ಚುತ್ತಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News