ಆರೋಪಿ ಶ್ರೀಕಾಂತ್‌ಗೆ ಪೊಲೀಸ್ ಕಸ್ಟಡಿ

Update: 2016-06-19 16:47 GMT

ಮಂಗಳೂರು, ಜೂ. 19: ಮಾರ್ಚ್ 21ರಂದು ನಗರದಲ್ಲಿ ನಡೆದ ಮಾಹಿತಿ ಹಕ್ಕು ಕಾರ್ಯಕರ್ತ ವಿನಾಯಕ ಪಾಂಡುರಂಗ ಬಾಳಿಗಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಗಳಲ್ಲಿ ಓರ್ವನಾದ ಕಾವೂರು ಶಾಂತಿನಗರದ ನಿವಾಸಿ ಶ್ರೀಕಾಂತ್ (42) ಎಂಬಾತನಿಗೆ ಜಿಲ್ಲಾ ನ್ಯಾಯಾಲಯವು ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ ಆದೇಶ ನೀಡಿದೆ.

ಉರ್ವ ಪೊಲೀಸ್ ಠಾಣಾ ನಿರೀಕ್ಷಕ ರವೀಶ್ ನಾಯ್ಕ ನೇತೃತ್ವದ ತಂಡವು ಪ್ರಕರಣದ ಪ್ರಮುಖ ಆರೋಪಿಗಳಲ್ಲೋರ್ವನಾದ ಶ್ರೀಕಾಂತ್‌ನನ್ನು ಮುಲ್ಕಿ ಬಳಿ ಶನಿವಾರ ಬಂಧಿಸಿತ್ತು. ಬಂಧಿತನನ್ನು ಇಂದು ಪೊಲೀಸರು ನ್ಯಾಯಾಲಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನಿಗೆ ಐದು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News