ಕೆಂಗಲ್ ಹನುಮಂತಯ್ಯರ ಪ್ರತಿಮೆ ಮುಂದೆ ಧರಣಿ ಕೂತ ಶಾಸಕ ಶಿವಮೂರ್ತಿ ನಾಯಕ್

Update: 2016-06-20 13:08 GMT

ಬೆಂಗಳೂರು, ಜೂ. 20: ರಾಜ್ಯದಲ್ಲಿ ನಡೆದ ಸಚಿವ ಸಂಪುಟ ವಿಸ್ತರಣೆ ಹತ್ತು ಹಲವು ಅಧ್ವಾನಗಳಿಗೆ ಕಾರಣವಾಗಿದೆ. ತಮ್ಮ ನಾಯಕರಿಗೆ ಸಚಿವ ಸ್ಥಾನ ಲಭಿಸಲಿಲ್ಲ ಎಂದು ರಾಜ್ಯದ ನಾನಾ ಕಡೆ ಪ್ರಭಾವಿ ಶಾಸಕರ ಬೆಂಬಲಿಗರು ಪ್ರತಿಭಟನೆ ನಡೆಸುತ್ತಿದ್ದರೆ ಇತ್ತ ಸಚಿವ ಸ್ಥಾನ ವಂಚಿತ ಶಾಸಕ ಶಿವಮೂರ್ತಿ ನಾಯಕ್ ಅವರು ವಿಧಾನಸೌಧದ ಮುಂಭಾಗದಲ್ಲಿರುವ ಕೆಂಗಲ್ ಹನುಮಂತಯ್ಯರ ಪ್ರತಿಮೆಯ ಮುಂದೆ ಏಕಾಂಗಿಯಾಗಿ ಧರಣಿ ಕೂತು ತಮ್ಮ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ.

ತಮಗೆ ಸಚಿವ ಸ್ಥಾನ ನೀಡದ ಕಾಂಗ್ರೆಸ್ ಹೈಕಮಾಂಡ್ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿರುವ ದಾವಣಗೆರೆ ಜಿಲ್ಲೆಯ ಮಾಯಕೊಂಡ ಶಾಸಕ ಶಿವಮೂರ್ತಿ ನಾಯಕ್, ಸಚಿವ ಸಂಪುಟ ಪುನಾರಚನೆಯ ಸಂದರ್ಭ ತಮಗೆ ಅನ್ಯಾಯವಾಗಿದೆ ಎಂದು ಹೇಳಿದ್ದಾರೆ. ಸಿಎಂ ಕೂಡಲೇ ಶಾಸಕಾಂಗ ಪಕ್ಷದ ಸಭೆ ಕರೆಯಬೇಕು. ನಾಳೆ ನಾವು 40 ಮಂದಿ ಶಾಸಕರು ಒಟ್ಟಾಗುತ್ತಿದ್ದೇವೆ. ರಾಜೀನಾಮೆ ನೀಡುವ ಬಗ್ಗೆ ನಾಳೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News