ಮುಡಿಪು: ಅಕ್ರಮ ಮರಳು ಸಾಗಾಟ; ಓರ್ವ ವಶಕ್ಕೆ

Update: 2016-06-24 13:31 GMT

ಕೊಣಾಜೆ, ಜೂ. 24: ಮುಡಿಪು ಸಮೀಪದ ಬಾಳೆಪುಣಿ ಗ್ರಾಮದ ಮುದುಂಗಾರುಕಟ್ಟೆ ಬಳಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ್ದಾರೆ.

ಮುದುಂಗಾರುಕಟ್ಟೆ ಎಂಬಲ್ಲಿ ಇನ್‌ಸ್ಪೆಕ್ಟರ್ ಅಶೋಕ್ ನೇತೃತ್ವದಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದ ಸಮಯದಲ್ಲಿ ಯಾವುದೇ ಪರವಾನಿಗೆ, ಸೂಕ್ತ ದಾಖಲೆ ಇಲ್ಲದೆ ಹೊರ ರಾಜ್ಯಕ್ಕೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಟಿಪ್ಪರನ್ನು ವಶಪಡಿಸಿಕೊಳ್ಳಲಾಗಿದೆ.

ಚಾಲಕ ಪುತ್ತೂರು ಕಬಕ ನಿವಾಸಿ ಅಬ್ದುಲ್ ಅಝೀಝ್ (25)ನನ್ನು ಬಂಧಿಸಲಾಗಿದ್ದು, ಇನ್ನಿಬ್ಬರು ಆರೋಪಿಗಳಾದ ಅಬ್ದುಲ್ಲತೀಫ್ ಮತ್ತು ಶರೀಫ್ ಪರಾರಿಯಾಗಿದ್ದಾರೆ. ಈ ಬಗ್ಗೆ ಕೊಣಾಜೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News