ಕಿಮ್ಮನೆಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ?

Update: 2016-06-24 14:26 GMT

ಬೆಂಗಳೂರು, ಜೂ. 24: ಸಂಪುಟ ಪುನಾರಚನೆ ವೇಳೆ ಸಚಿವ ಸ್ಥಾನ ಕಳೆದುಕೊಂಡ ಕಿಮ್ಮನೆ ರತ್ನಾಕರ ಅವರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆ ನೀಡಲು ಮುಖ್ಯಮಂತ್ರಿ ಉದ್ದೇಶಿಸಿದ್ದಾರೆ.
ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡುವ ಸಂಬಂಧ ಸಿಎಂ ಸಿದ್ದರಾಮಯ್ಯ, ಕಿಮ್ಮನೆ ರತ್ನಾಕರ ಅವರಿಗೆ ದೂರವಾಣಿ ಕರೆ ಮಾಡಿದ್ದು, ಸಮಾಲೋಚನೆ ನಡೆಸಿದ್ದಾರೆ. ಆದರೆ, ಕಿಮ್ಮನೆ ಅವರು ಆ ಸ್ಥಾನ ಸ್ವೀಕರಿಸುವ ಅಥವಾ ನಿರಾಕರಿಸುವ ಯಾವುದೇ ತೀರ್ಮಾನ ಕೈಗೊಂಡಿಲ್ಲ ಎಂದು ಗೊತ್ತಾಗಿದೆ.
ಸಂಪುಟದಲ್ಲಿ ಖಾಲಿ ಇರುವ ಒಂದು ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡುವುದು ಹಾಗೂ ಅದೇ ಸಮುದಾಯದ ಮತ್ತೊಬ್ಬ ಶಾಸಕರಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಸ್ಥಾನ ನೀಡಲು ಸಿಎಂ ಉದ್ದೇಶಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News