×
Ad

ಪಕ್ಷ ವಿರೋಧಿ ಚಟುವಟಿಕೆ ಸಹಿಸಲ್ಲ: ಯಡಿಯೂರಪ್ಪ ಎಚ್ಚರಿಕೆ

Update: 2016-07-02 19:05 IST

  ಬೆಂಗಳೂರು, ಜು.2: ಯಾರು ಎಷ್ಟೇ ದೊಡ್ಡವರಾಗಿದ್ದರೂ ಪಕ್ಷ ವಿರೋಧಿ ಚಟುವಟಿಕೆಯನ್ನು ಬಿಜೆಪಿ ಸಹಿಸುವುದಿಲ್ಲ ಎನ್ನುವ ಮೂಲಕ ಸಭೆಯಿಂದ ದೂರ ಉಳಿದು ಅತೃಪ್ತಿ ವ್ಯಕ್ತಪಡಿಸಿರುವ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೆ.ಎಸ್.ಈಶ್ವರಪ್ಪಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ನಡೆದ ರಾಜ್ಯ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು, ಸದ್ಯದಲ್ಲಿಯೇ ಶಿಸ್ತು ಸಮಿತಿ ರಚಿಸಿ ಇಂತಹ ಚಟುವಟಿಕೆಗಳಿಗೆ ಕಡಿವಾಣ ಹಾಕುವುದಾಗಿ ಎಚ್ಚರಿಕೆ ನೀಡಿದರು.

   ಪದಾಧಿಕಾರಿಗಳ ಸಭೆಯಲ್ಲಿ ಕೆ.ಎಸ್.ಈಶ್ವರಪ್ಪ ಗೈರು ಹಾಜರಾಗಿರುವುದನ್ನು ಗಮನಿಸಿದ ಬಿ.ಎಸ್.ಯಡಿಯೂರಪ್ಪ ಅವರು ಯಾರು ಎಷ್ಟೇ ದೊಡ್ಡವರಾದರೂ ಗೊಂದಲದ ಹೇಳಿಕೆಗಳನ್ನು ಕೊಟ್ಟರೆ ಅವರ ವಿರುದ್ದ ಶಿಸ್ತು ಕ್ರಮ ಅನಿವಾರ್ಯವಾಗುತ್ತದೆ. ಮಾಧ್ಯಮದವರಿಗೆ ಸಣ್ಣ ಸುದ್ದಿ ಸಿಕ್ಕರೂ ದೊಡ್ಡದಾಗಿ ಬಿಂಬಿಸುತ್ತಾರೆ. ಅದಕ್ಕೆ ಹೇಳಿಕೆ ಕೊಡುವಾಗ ಎಚ್ಚರ ಎಂದು ನೇರವಾಗಿ ಅತೃಪ್ತರಿಗೆ ಟಾಂಗ್ ನೀಡಿದರು.

ರುದ್ರೇಗೌಡರು ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಸಮಾರಂಭ ಅದ್ದೂರಿಯಾಗಿತ್ತು. ಇದರಿಂದ, ಜಿಲ್ಲೆಯ ಜನ ಬಿಜೆಪಿಗೆ ಎಷ್ಟರಮಟ್ಟಿಗೆ ಬೆಂಬಲ ನೀಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ಶಿವಮೊಗ್ಗ ಜನ ಇದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಬಿಜೆಪಿ ಪದಾಧಿಕಾರಿಗಳ ಕಾರ್ಯಕ್ರಮದಲ್ಲೇ ಎಲ್ಲರ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದರು. ರುದ್ರೇಗೌಡರು ಶಿವಮೊಗ್ಗ ಜಿಲ್ಲಾ ಅ್ಯಕ್ಷರಾಗಿಅಧಿಕಾರಸ್ವೀಕಾರಸಮಾರಂ ಅದ್ದೂರಿಯಾಗಿತ್ತು. ಇದರಿಂದ, ಜಿಲ್ಲೆಯ ಜನ ಬಿಜೆಪಿಗೆ ಎಷ್ಟರಮಟ್ಟಿಗೆ ಬೆಂಬಲ ನೀಡುತ್ತಿದ್ದಾರೆ ಎಂಬುದು ಸ್ಪಷ್ಟವಾಗುತ್ತದೆ ಎಂದು ಪರೋಕ್ಷವಾಗಿ ಈಶ್ವರಪ್ಪ ವಿರುದ್ಧ ಶಿವಮೊಗ್ಗ ಜನ ಇದ್ದಾರೆ ಎಂದು ಯಡಿಯೂರಪ್ಪ ಹೇಳಿದರು. ಬಿಜೆಪಿ ಪದಾಧಿಕಾರಿಗಳ ಕಾರ್ಯಕ್ರಮದಲ್ಲೇ ಎಲ್ಲರ ಸಮ್ಮುಖದಲ್ಲಿಯೇ ಈ ಹೇಳಿಕೆ ನೀಡಿ ಅಚ್ಚರಿ ಮೂಡಿಸಿದರು. ಇದೇ ತಿಂಗಳ 4ನೆ ತಾರೀಖಿನಿಂದ ವಿಧಾನ ಮಂಡಳ ಅಧಿವೇಶನ ಆರಂಭವಾಗಲಿದ್ದು, ಎಲ್ಲ ಶಾಸಕರು ನೂರಕ್ಕೆ ನೂರರಷ್ಟು ಸದನದಲ್ಲಿ ಹಾಜರಿದ್ದು ರಾಜ್ಯ ಸರಕಾರದ ವಿರುದ್ಧ ಗುಡುಗಬೇಕು. ಅಲ್ಲದೆ, ಜನ ನಿಮ್ಮನ್ನು ಆಯ್ಕೆ ಮಾಡಿ ಕಳುಹಿಸಿರೋದು ಅಧಿವೇಶನದಲ್ಲಿ ಹಾಜರಿರಲಿಕ್ಕೆ ಎಂದು ಹೇಳಿದರು.

ಇವತ್ತಿನ ಕಾರ್ಯಕ್ರಮದ ವರದಿ ಕೇಂದ್ರದ ವರಿಷ್ಠರಿಗೆ ಹೋಗುತ್ತದೆ. ನಮ್ಮ ಬಗ್ಗೆ ರಾಷ್ಟ್ರೀಯ ವರಿಷ್ಠರು ಸಂತೋಷ್ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗದಲ್ಲಿ ನಮ್ಮ ರುದ್ರೇಗೌಡರು ಅದ್ಭುತವಾದ ಕಾರ್ಯಕ್ರಮ ಮಾಡಿ ಯಶಸ್ವಿಯಾದರು. ಇದೇ ರೀತಿ ರಾಜ್ಯಾದ್ಯಂತ ಕಾರ್ಯಕ್ರಮವನ್ನು ಏರ್ಪಡಿಸಿ ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

ಇವತ್ತಿನ ಕಾರ್ಯಕ್ರಮದ ವರದಿ ಕೇಂದ್ರದ ವರಿಷ್ಠರಿಗೆ ಹೋಗುತ್ತದೆ. ನಮ್ಮ ಬಗ್ಗೆ ರಾಷ್ಟ್ರೀಯ ವರಿಷ್ಠರು ಸಂತೋಷ್ ವ್ಯಕ್ತಪಡಿಸಿದ್ದಾರೆ. ಹಾಗೂ ಶಿವಮೊಗ್ಗದಲ್ಲಿ ನಮ್ಮ ರುದ್ರೇಗೌಡರು ಅದ್ಭುತವಾದ ಕಾರ್ಯಕ್ರಮ ಮಾಡಿ ಯಶಸ್ವಿಯಾದರು. ಇದೇ ರೀತಿ ರಾಜ್ಯಾದ್ಯಂತ ಕಾರ್ಯಕ್ರಮವನ್ನು ಏರ್ಪಡಿಸಿ ಎಂದು ಪದಾಧಿಕಾರಿಗಳಿಗೆ ಕರೆ ನೀಡಿದರು. 150ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದಾಗಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾಗೆ ಮಾತುಕೊಟ್ಟಿದ್ದೇವೆ. ಹೀಗಾಗಿ, ಕೊಟ್ಟ ಮಾತಿನಂತೆ ನಡೆದುಕೊಳ್ಳಲು ನಾವೆಲ್ಲರೂ ಒಂದು ಕ್ಷಣ ವ್ಯರ್ಥ ಮಾಡದೆ ಪೂರ್ಣಾವಧಿ ಕಾರ್ಯಕರ್ತರ ರೀತಿಯಲ್ಲಿ ಕೆಲಸ ಮಾಡಬೇಕೆಂದು ಪದಾಧಿಕಾರಿಗಳಿಗೆ ಕರೆ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News