ಐವನ್ ನೇಮಕಕ್ಕೆ ಸಚಿವ ಖಾದರ್ ಹರ್ಷ
Update: 2016-07-02 20:48 IST
ಮಂಗಳೂರು, ಜು.2: ವಿಧಾನಪರಿಷತ್ತಿನಲ್ಲಿ ಸರಕಾರದ ಮುಖ್ಯ ಸಚೇತಕರನ್ನಾಗಿ ಐವನ್ ಡಿಸೋಜ ಅವರನ್ನು ನೇಮಕ ಮಾಡಿರುವುದಕ್ಕೆ ಆಹಾರ ಸಚಿವ ಯು.ಟಿ.ಖಾದರ್ ಸಂತಸ ವ್ಯಕ್ತಪಡಿಸಿದ್ದಾರೆ.
ಐವನ್ ನೇಮಕವು ಜಿಲ್ಲೆಗೆ ಹಾಗೂ ಪಕ್ಷದ ಕಾರ್ಯಕರ್ತರಿಗೆ ಸಂದ ಗೌರವವಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ಸಲ್ಲಿಸುವುದಾಗಿ ಸಚಿವ ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.