ಗಾಂಜಾ ಮಾರಾಟ: ಆರೋಪಿ ಸೆರೆ
ಮಂಗಳೂರು, ಜು.2: ಮಂಗಳೂರು ನಗರಕ್ಕೆ ಗಾಂಜಾವನ್ನು ತಂದು ಮಾರಾಟ ಮಾಡುತ್ತಿದ್ದ ಪ್ರಮುಖ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿ ಆತನಿಂದ ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಚೇರುಗೋಳಿ ಯ ಯೂಸುಫ್ ಎಂಬವರ ಪುತ್ರ ಅಬ್ದುಲ್ ನಾಸೀರ್ ಎಂಬಾತನನ್ನು ಬಂಧಿಸಲಾಗಿದ್ದು ಈತನಿಂದ 30 ಸಾವಿರ ರೂ.ವೌಲ್ಯದ 1ಕೆ.ಜಿ 100 ಗ್ರಾಂ ಗಾಂಜಾವನ್ನು , ಗಾಂಜಾ ಮಾರಾಟ ಮಾಡಲು ಉಪಯೋಗಿಸಿದ ಮೊಬೈಲ್ ಪೋನ್ ಹಾಗೂ ಆ್ಯಕ್ಟಿವಾ ಸ್ಕೂಟರ್ನ್ನು ವಶಪಡಿಸಿಕೊಳ್ಳಲಾಗಿದೆ.
ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೆ.ಸಿ ರೋಡ್ ಬಳಿಯ ಸಹಕಾರಿ ಬ್ಯಾಂಕ್ ವೊಂದರ ಮುಂಭಾಗ ಕಾಸರಗೋಡು ಜಿಲ್ಲೆಯ ನೊಂದಾಣೆ ಸಂಖ್ಯೆಯ ಬಿಳಿ ಬಣ್ಣದ ಹೊಂಡಾ ಅಕ್ಟಿವಾ ವಾಹನದಲ್ಲಿ ಈತ ಗಾಂಜಾವನ್ನು ಸಾಗಾಟ ಮಾಡುತ್ತಿದ್ದಾಗ ಈತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಆರೋಪಿಯ ವಿರುದ್ಧ ಈ ಹಿಂದೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಕಳವು ಹಾಗೂ ದರೋಡೆಗೆ ಯತ್ನಿಸಿದ ಪ್ರಕರಣ ಹಾಗೂ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ 2 ಕಳವು ಪ್ರಕರಣವು ದಾಖಲಾಗಿರುತ್ತದೆ.
ಆರೋಪಿಯನ್ನು ಹಾಗೂ ವಶಪಡಿಸಿಕೊಂಡ ಸೊತ್ತನ್ನು ಮುಂದಿನ ಕ್ರಮಕ್ಕಾಗಿ ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾತರಿಸಲಾಗಿದೆ. ಸಿ.ಸಿ.ಬಿ ಘಟಕದ ಇನ್ಸ್ಪೆಕ್ಟರ್ ವೆಲೆಂಟೈನ್ ಡಿಸೋಜ ಮತ್ತು ಸಬ್ ಇನ್ಸ್ಪೆಕ್ಟರ್ ಶ್ಯಾಮ್ ಸುಂದರ್ ಹಾಗೂ ಸಿಬ್ಬಂದಿ ಪತ್ತೆಕಾರ್ಯದಲ್ಲಿ ಭಾಗವಹಿಸಿದ್ದರು.