ಕಡಬ: ಆರೋಪಿಗಳ ಬಂಧನಕ್ಕೆ ಒತ್ತಾಯಿಸಿ ರಸ್ತೆತಡೆ, ಧರಣಿ
Update: 2016-07-09 10:24 GMT
ಕಡಬ, ಜು.9: ಮಂಗಳೂರು ಡಿವೈಎಸ್ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೊಳಪಡಿಸಬೇಕೆಂದು ಹಾಗೂ ಆರೋಪಿಸಲಾದ ಪ್ರಮುಖ ಆರೋಪಿಗಳನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿ ಕಡಬ ಬಿಜೆಪಿ ಯುವ ಮೋರ್ಚಾ ವತಿಯಿಂದ ಕಡಬ ಪೇಟೆಯಲ್ಲಿ ರಸ್ತೆ ತಡೆ ನಡೆಸಿ ಧರಣಿ ನಡೆಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಪ್ರಮುಖರಾದ ಸತೀಶ್ ನಾಯ್ಕ್, ಸೀತಾರಾಮ ಗೌಡ ಪೊಸವಳಿಕೆ, ಮನೋಹರ್ ರೈ, ಪುಲಸ್ತ್ಯಾ ರೈ, ಆದಂ ಕುಂಡೋಳಿ, ಫಯಾಝ್ ಕೆನರಾ, ಶಿವಪ್ರಸಾದ್ ರೈ ಮೈಲೇರಿ, ಹಿಂದೂ ಸಂಘಟನೆಯ ಮುಖಂಡರಾದ ರವಿರಾಜ ಶೆಟ್ಟಿ, ಪ್ರಕಾಶ್ ಎನ್.ಕೆ., ಸುರೇಶ್ ದೇಂತಾರು ಮೊದಲಾದವರು ಉಪಸ್ಥಿತರಿದ್ದರು.