ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

Update: 2016-07-21 18:27 GMT

 ಕಾರ್ಕಳ, ಜು.21: ತಾಲೂಕಿನ ರಾಜಾಪುರ ಸಾರಸ್ವತ ಸಮಾಜಕ್ಕೆ ಸೇರಿದ ಪದವಿ, ಇಂಜಿನಿಯರ್, ವೈದ್ಯಕೀಯ, ಡಿಪ್ಲೊಮಾ ಹಾಗೂ ನರ್ಸಿಂಗ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ವಿದ್ಯಾರ್ಥಿ ವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ವಿದ್ಯಾರ್ಥಿಗಳು ಕಲಿಯುತ್ತಿರುವ ಸಂಸ್ಥೆಯ ವ್ಯಾಸಂಗ ದೃಢೀಕರಣ ಪತ್ರದೊಂದಿಗೆ ಲಿಖಿತ ಅರ್ಜಿಯನ್ನು ಪೂರ್ಣ ವಿಳಾಸದೊಂದಿಗೆ ಆ.15ರೊಳಗೆ ಅಧ್ಯಕ್ಷರು, ಕಾರ್ಕಳ ತಾಲೂಕು ರಾಜಾಪುರ ಸಾರಸ್ವತ ಸಂಘ, ಲಕ್ಷ್ಮೀಪುರ ಅಂಚೆ, ಹಿರ್ಗಾನ, ಕಾರ್ಕಳ ತಾಲೂಕು ಈ ವಿಳಾಸಕ್ಕೆ ಕಳುಹಿಸುವಂತೆ ಸಂಘದ ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News