ಬಿಜೆಪಿ ಆಡಳಿತದ ರಾಜ್ಯಗಳಲ್ಲಿ ದಲಿತರ ಮೇಲೆ ದೌರ್ಜನ್ಯ: ಆರೋಪ

Update: 2016-07-23 18:29 GMT

ಮಂಗಳೂರು, ಜು.23: ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ದಲಿತ ವರ್ಗದ ಮೇಲೆ ದೌರ್ಜನ್ಯ, ಅತ್ಯಾಚಾರ ಪ್ರಕರಣಗಳು ಹೆಚ್ಚುತ್ತಿದೆ ಎಂದು ದ.ಕ. ಜಿಲ್ಲಾ ಕಾಂಗ್ರೆಸ್ ಸಮಿತಿ ವಕ್ತಾರ ಎ.ಸಿ. ವಿನಯರಾಜ್ ಆರೋಪಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ದಲಿತರನ್ನು ಮತಬ್ಯಾಂಕ್‌ಗಾಗಿ ಮಾತ್ರ ಓಲೈಸಲಾಗುತ್ತಿದೆ. ಅವರ ಮೇಲಾಗುತ್ತಿರುವ ದೌರ್ಜನ್ಯಗಳನ್ನು ನಿಯಂತ್ರಿಸುವಲ್ಲಿ ಕೇಂದ್ರ ಸರಕಾರ ವಿಫಲವಾಗಿದೆ ಎಂದರು.

ಪ್ರತಿಯೊಂದು ವಿಚಾರದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಟ್ವೀಟ್ ಮಾಡುವ ಪ್ರಧಾನಮಂತ್ರಿಯವರು ದಲಿತರ ಮೇಲಾಗುತ್ತಿರುವ ದೌರ್ಜನ್ಯಗಳ ಕುರಿತು ಮಾತನಾಡುತ್ತಿಲ್ಲ. ಇದು ದಲಿತರ ಬಗ್ಗೆ ಅವರಿಗಿರುವ ಕಾಳಜಿಯನ್ನು ತೋರಿಸುತ್ತಿದೆ. ದೌರ್ಜನ್ಯವನ್ನು ತಡೆಗಟ್ಟುವಲ್ಲಿ ಕೇಂದ್ರ ಗೃಹಮಂತ್ರಿರಾಜನಾಥ ಸಿಂಗ್ ಮತ್ತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿಲರಾಗಿದ್ದಾರೆ ಎಂದು ಅವರು ಆಪಾದಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷೆ ಅಪ್ಪಿ, ಎಸ್ಸಿ-ಎಸ್ಟಿ ಘಟಕದ ಪದ್ಮನಾಭ ನರಿಂಗಾನ, ನಗರ ಉತ್ತರ ಬ್ಲಾಕ್ ಕಾಂಗ್ರೆಸ್‌ಅಧ್ಯಕ್ಷ ವಿಶ್ವಾಸ್ ಕುಮಾರ್‌ದಾಸ್, ಸದಾಶಿವ ಅಮೀನ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News