ಕೃಷ್ಣ ಮೃಗ ಬೇಟೆ ಪ್ರಕರಣ: ಸಲ್ಮಾನ್ ಖಾನ್ ದೋಷಮುಕ್ತ; ರಾಜಸ್ಥಾನ ಹೈಕೋರ್ಟ್ ಮಹತ್ವದ ತೀರ್ಪು
Update: 2016-07-25 05:48 GMT
ಜೈಪುರ, ಜು.25: ಕೃಷ್ಣ ಮೃಗ ಬೇಟೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿದ್ದ ಬಾಲಿವುಡ್ ಸ್ಟಾರ್ ಸಲ್ಮಾನ್ ಖಾನ್ ಅವರನ್ನು ರಾಜಸ್ಥಾನ ಹೈಕೋರ್ಟ್ ದೋಷಮುಕ್ತಗೊಳಿಸಿ ಇಂದು ತೀರ್ಪು ನೀಡಿದೆ.
1998ರಲ್ಲಿ ಸಲ್ಮಾನ್ ಖಾನ್ ಅವರು ಹಿಂದಿ ಚಿತ್ರ 'ಹಮ್ ಸಾಥ್ ಸಾಥ್ ಹೈ' ಶೂಟಿಂಗ್ ವೇಳೆ ಕೃಷ್ಣ ಮೃಗ ಬೇಟೆಯಾಡಿದ್ದಾರೆಂದು ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಎರಡು ಪ್ರಕರಣಗಳಲ್ಲಿ ಸಲ್ಮಾನ್ ಖಾನ್ ಅವರಿಗೆ 5 ವರ್ಷ ಮತ್ತು 1 ವರ್ಷ ಜೈಲು ಸಜೆ ವಿಧಿಸಲಾಗಿತ್ತು. ಕೆಳ ದರ್ಜೆ ನ್ಯಾಯಾಲಯದ ತೀರ್ಪನ್ನು ಸಲ್ಮಾನ್ ಖಾನ್ ರಾಜಸ್ಥಾನ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ರಾಜಸ್ಥಾನ ಹೈಕೋರ್ಟ್ 'ಬೆನಿಫಿಟ್ ಆಫ್ ಡೌಟ್' ಮೇಲೆ ಸಲ್ಮಾನ್ ಖಾನ್ ಅವರನ್ನು ಖುಲಾಸೆಗೊಳಿಸಿದೆ.