ಡಿ ಕೆ ಯಸ್ ಸಿ ಗಲ್ಫ್ ಮೀಟ್

Update: 2016-07-25 11:40 GMT

ಮೂಳೂರ್. ದಕ್ಷಿಣ ಕರ್ನಾಟಕ ಸುನ್ನಿ ಸೆಂಟರ್ (ರಿ) ಮಂಗಳೂರು ಇದರ ಅಧೀನ ಸಂಸ್ಥೆಯಾದ ಮೂಳೂರ್ ಮರ್ಕಝಿನಲ್ಲಿ ದಿನಾಂಕ 26/07/2016 ಮಂಗಳವಾರ ಬೆಳಿಗ್ಗೆ 11 ಗಂಟೆಗೆ  ಗಲ್ಫ್ ಮೀಟ್ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಕೇಂದ್ರ ಸಮೀತಿಯ ಅಧ್ಯಕ್ಷರಾದ ಅಸ್ಸಯ್ಯದ್ ಕೆ ಯಸ್  ಆಟಕೋಯ ತಂಗಳ್ ಕುಂಬೋಳ್ ರವರ ಘನ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ಕೇಂದ್ರ ಕಾರ್ಯಾಧ್ಯಕ್ಷರಾದ ಜನಾಬ್ ಅಬ್ದುಲ್ ಹಮೀದ್ ಉಳ್ಳಾಲ್, ಕೇಂದ್ರ ಪ್ರಧಾನ ಕಾರ್ಯದರ್ಶಿಯವರಾದ ಜನಾಬ್ ಹಾಜಿ ಇಸ್ಮಾಯಿಲ್ ಕಿನ್ಯ, ಹಿರಿಯರಾದ ಜನಾಬ್ ಹಾಜಿ ಅನ್ವರ್ ಹುಸೈನ್ ಗೂಡಿನಬಳಿ ಇನ್ನಿತರ ಹಲವಾರು ಘಟಾನುಘಟಿ ನೇತಾರರು ಬಾಗವಹಿಸಲಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News