×
Ad

ನರೇಶ್ ಶೆಣೈ ಜಾಮೀನು ಅರ್ಜಿ ವಿಚಾರಣೆ

Update: 2016-07-25 23:04 IST

ಮಂಗಳೂರು, ಜು. 25: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನರೇಶ್ ಶೆಣೈ ಜಾಮೀನು ಅರ್ಜಿಯ ಕುರಿತ ವಿಚಾರಣೆ ಸೋಮವಾರ 2ನೆ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯದಲ್ಲಿ ಜರಗಿತು.

ಜಾಮೀನು ಕುರಿತ ವಿಚಾರಣೆಯು ಮಂಗಳವಾರವೂ ನಡೆಯಲಿದೆ . ವಿನಾಯಕ ಬಾಳಿಗಾ ಕೊಲೆ ಪ್ರಕರಣದಲ್ಲಿ ಒಟ್ಟು 6 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.

ಆದರೆ, ಈ ಪ್ರಕರಣದಲ್ಲಿ ಇಬ್ಬರಿಗೆ ಈಗಾಗಲೇ ಜಾಮೀನು ದೊರಕಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News