ವೇತನ ಶೇ.10ರಷ್ಟು ಹೆಚ್ಚಳಕ್ಕೆ ಸಿದ್ಧ: ಸಿಎಂ

Update: 2016-07-25 19:00 GMT

ಬೆಂಗಳೂರು, ಜು.25: ಕೆಎಸ್ಸಾರ್ಟಿಸಿ, ಬಿಎಂಟಿಸಿ ಸೇರಿದಂತೆ ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಯ ವೇತನವನ್ನು ಶೇ.10ರಷ್ಟು ಹೆಚ್ಚಳ ಮಾಡಲು ಸರಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸೋಮವಾರ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರಕಾರ ಶೇ.10ರಷ್ಟು ವೇತನ ಹೆಚ್ಚಳ ಮಾಡಲು ಸಿದ್ಧವಿದೆ. ಆದರೆ, ಮುಷ್ಕರ ನಿರತರು ಆಗ್ರಹಿಸುವಂತೆ ಶೇ.30ರಷ್ಟು ವೇತನ ಹೆಚ್ಚಿಸಲು ಸಾಧ್ಯವಿಲ್ಲ ಎಂದರು.

ಸಾರಿಗೆ ನಿಗಮಗಳು ನಷ್ಟದಲ್ಲಿವೆ. ಈ ಹಂತದಲ್ಲಿ ಶೇ.30ರಷ್ಟು ವೇತನ ಹೆಚ್ಚಳ ಮಾಡಿದರೆ ಸರಕಾರದ ಬೊಕ್ಕಸಕ್ಕೆ ಹೆಚ್ಚಿನ ಹೊರೆಯಾಗಲಿದೆ. ಸಾರಿಗೆ ಇಲಾಖೆ ನೌಕರರು ಹಾಗೂ ಸಿಬ್ಬಂದಿಯ ಜೊತೆ ಚರ್ಚೆ ಮಾಡಲು ಸರಕಾರ ಸಿದ್ಧವಿದೆ. ಅವರು ಮುಷ್ಕರ ಕೈ ಬಿಟ್ಟು ಮಾತುಕತೆಗೆ ಬರಲಿ ಎಂದು ಮುಖ್ಯಮಂತ್ರಿ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News