ಬಿಬಿಎಂಪಿ ಜಾಗದ ಅತಿಕ್ರಮಣ ಪ್ರಕರಣ ರಾಘವೇಶ್ವರ ಶ್ರೀಗಳಿಗೆ ಹೈಕೋರ್ಟ್ ನೋಟಿಸ್

Update: 2016-07-29 18:45 GMT

ಬೆಂಗಳೂರು, ಜು.29: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಗೆ(ಬಿಬಿಎಂಪಿ) ಸೇರಿದ ಜಾಗವನ್ನು ಅತಿಕ್ರಮಣ ಮಾಡಲಾಗಿದೆ ಎಂಬ ಆರೋಪದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಸಿದಂತೆ ರಾಮಚಂದ್ರಾಪುರ ಮಠದ ಶ್ರೀರಾಘವೇಶ್ವರ ಭಾರತೀ ಶ್ರೀಗಳು ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಆದೇಶಿಸಿದೆ.

  

ಈ ಕುರಿತಂತೆ ಬೆಂಗಳೂರಿನ ಪವನ ಪ್ರಸಾದ್ ಸಲ್ಲಿಸಿರುವ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎಸ್.ಕೆ.ಮುಖರ್ಜಿ ಹಾಗೂ ನ್ಯಾಯಮೂರ್ತಿ ರವಿ ಮಳೀಮಠ ಅವರಿದ್ದ ವಿಭಾಗೀಯ ಪೀಠವು ವಿಚಾರಣೆ ನಡೆಸಿತು.ರಿನಗರದಲ್ಲಿ ಬಿಬಿಎಂಪಿಗೆ ಸೇರಿದ ಜಾಗವನ್ನು ಶ್ರೀಮಠ ಅತಿಕ್ರಮಣ ಮಾಡಿದೆ. ಈ ಸಂಗತಿಯನ್ನು ಬೆಂಗಳೂರು ನಗರಾಭಿವೃದ್ಧಿ ಪ್ರಾಕಾರವೇ (ಬಿಡಿಎ) ಮಾಹಿತಿ ಹಕ್ಕು ಕಾಯ್ದೆಯಡಿ ಸ್ಪಷ್ಟಪಡಿಸಿದೆ. ಹೀಗಾಗಿ, ಈ ಪ್ರದೇಶದಲ್ಲಿ ಶ್ರೀಮಠದ ಕಟ್ಟಡವೂ ಸೇರಿದಂತೆ ಅತಿಕ್ರಮಣ ಮಾಡಿರುವವರ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಡಿಎ ಈಗಾಗಲೇ ಬಿಬಿಎಂಪಿಗೆ ಸೂಚಿಸಿದೆ. ಆದರೂ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ ಎಂಬುದು ಅರ್ಜಿದಾರರ ಆರೋಪ. ಪ್ರಕರಣದಲ್ಲಿ ಬಿಬಿಎಂಪಿ, ಬಿಡಿಎ ಮತ್ತು ಬಿಎಂಟಿಎ್(ಬೆಂಗಳೂರು ಮೆಟ್ರೊ ಪಾಲಿಟನ್ ಟಾಸ್ಕ್‌ಪೋರ್ಸ್) ಆಯುಕ್ತರನ್ನು ಪ್ರತಿವಾದಿಗಳನ್ನಾಗಿ ಹೆಸರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News