ತೆಕ್ಕಟ್ಟೆ: ಗ್ಯಾಸ್ ಟ್ಯಾಂಕರ್ ಆವಾಂತರಕ್ಕೆ ಕೂಲಿ ಕಾರ್ಮಿಕ ಬಲಿ

Update: 2016-07-30 07:17 GMT

ಉಡುಪಿ, ಜು.30: ನಿಯಂತ್ರಣ ತಪ್ಪಿದ ಗ್ಯಾಸ್ ಟ್ಯಾಂಕರೊಂದು ಅಂಗಡಿಗೆ ನುಗ್ಗಿ ರಸ್ತೆ ಬದಿ ನಿಂತಿದ್ದ ಕೂಲಿ ಕಾರ್ಮಿಕರೋರ್ವರು ಮೃತಪಟ್ಟ ಘಟನೆ ತೆಕ್ಕಟ್ಟೆ ಬಳಿ ಸಂಭವಿಸಿದೆ.

ಮೃತ ಕೂಲಿ ಕಾರ್ಮಿಕರನ್ನು ಮಣೂರು ಬಾಳೆಬೆಟ್ಟು ನಿವಾಸಿ ಅಣ್ಣಪ್ಪ ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಬರುತ್ತಿದ್ದ ಟ್ಯಾಂಕರ್ ತೆಕ್ಕಟ್ಟೆ ಸಮೀಪಿಸುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಂದಕ್ಕೆ ನುಗ್ಗಿದೆ. ಈ ಸಂದರ್ಭ ಅಲ್ಲೇ ರಸ್ತೆ ಬದಿಯಲ್ಲಿ ನಿಂತಿದ್ದ ಅಣ್ಣಪ್ಪ ಅವರಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.

ಕೋಟ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News