ಮುಖ್ಯಮಂತ್ರಿಗೆ ಪುತ್ರ ವಿಯೋಗ: ಸಂತಾಪ
Update: 2016-07-30 23:53 IST
ಉಡುಪಿ, ಜು.30: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ನಿಧನಕ್ಕೆ ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ, ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ. ಖಾದರ್, ಮುಖ್ಯ ಸಚೇತಕ ಐವನ್ ಡಿಸೋಜ, ಶಾಸಕರಾದ ಮೊಯ್ದಿನ್ ಬಾವಾ, ಅಭಯಚಂದ್ರಜೈನ್, ಜೆ.ಆರ್. ಲೋಬೊ, ಪೇಜಾವರ ಮಠದ ಶ್ರೀವಿಶ್ವೇಶ ತೀರ್ಥಸ್ವಾಮೀಜಿ, ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಗಣೇಶ್ ಕಾರ್ಣಿಕ್ ಎಸ್ಡಿಪಿಐ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಮುನೀರ್ ಬೆಂಗ್ರೆ ತೀವ್ರ ಸಂತಾ
ವ್ಯಕ್ತಪಡಿಸಿದ್ದಾರೆ.