ಪುತ್ತೂರು: ಅಸಹಾಯಕ ವಿಧವೆಯರಿಗೆ ಆರ್ಥಿಕ ನೆರವು
Update: 2016-08-03 13:20 GMT
ಪುತ್ತೂರು, ಆ.3: ಕುಟುಂಬಕ್ಕೆ ಆಧಾರವಾಗಿದ್ದ ಪತಿಯನ್ನು ಕಳಕೊಂಡ ಪುತ್ತೂರು ವಿಧಾನಸಬಾ ಕ್ಷೇತ್ರದ 75 ಮಂದಿ ವಿಧವೆ ಮಹಿಳೆಯರಿಗೆ ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆಯಡಿ ತಲಾ 20 ಸಾವಿರ ರೂ. ನೀಡಲಾಗುತ್ತಿದೆ. ಅಸಹಾಯಕ ಮಹಿಳೆಯರಿಗೆ ನೆರವು ನೀಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ, ಶಾಸಕಿ ಶಕುಂತಳಾ ಶೆಟ್ಟಿ ತಿಳಿಸಿದ್ದಾರೆ.
ಅವರು ಪುತ್ತೂರು ಕಂದಾಯ ಇಲಾಖೆಯ ವತಿಯಿಂದ ಇಲ್ಲಿನ ಪುರಭವನದಲ್ಲಿ ಬುಧವಾರ ರಾಷ್ಟ್ರೀಯ ಕುಟುಂಬ ಸಹಾಯಧನ ಯೋಜನೆಯ ಫಲಾನುಭವಿಗಳಿಗೆ ಚೆಕ್ ವಿತರಿಸಿ ಮಾತನಾಡಿದರು.
ತಹಶೀಲ್ದಾರ್ ಪುಟ್ಟು ಶೆಟ್ಟಿ ಇದ್ದರು. ಉಪತಹಶೀಲ್ದಾರ್ ಶ್ರೀಧರ್ ಕೋಡಿಜಾಲು ಸ್ವಾಗತಿಸಿ, ವಂದಿಸಿದರು. ಕಂದಾಯ ಇಲಾಖೆಯ ಅಧಿಕಾರಿಗಳು ಚೆಕ್ ವಿತರಿಸಲು ಸಹಕರಿಸಿದರು.