ಎನ್‌ಡಬ್ಲುಎಫ್ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ

Update: 2016-08-04 04:43 GMT

ಮಂಗಳೂರು, ಆ.4: ಗೋ ಮಾಂಸದ ವಿಚಾರವಾಗಿ ಇತ್ತೀಚಿಗೆ ಮಧ್ಯ ಪ್ರದೇಶದಲ್ಲಿ ಮುಸ್ಲಿಂ ಮಹಿಳೆಯರ ಮೇಲಿನ ದಾಳಿ ಮತ್ತು ದೇಶದ ವಿವಿಧೆಡೆ ದಲಿತರನ್ನು ಗುರಿಯಾಗಿಸಿ ನಡೆಯುತ್ತಿರುವ ಹಲ್ಲೆಯ ಕುರಿತಂತೆ ಕ್ರಮಕೈಗೊಳ್ಳುವಂತೆ ನ್ಯಾಷನಲ್ ವಿಮೆನ್ಸ್ ಫ್ರಂಟ್ ದ.ಕ. ಜಿಲ್ಲಾ ಸಮಿತಿ ವತಿಯಿಂದ ದ.ಕ. ಜಿಲ್ಲಾಧಿಕಾರಿ ಡಾ. ಕೆ.ಜಿ.ಜಗದೀಶ್ರ ಮೂಲಕ ರಾಷ್ಟ್ರಪತಿಯವರಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ವಿಮೆನ್ಸ್ ಫ್ರಂಟ್‌ನ ಜಿಲ್ಲಾಧ್ಯಕ್ಷೆ ರಝಿಯಾ ಬಿ., ಜಿಲ್ಲಾ ಕಾರ್ಯದರ್ಶಿ ರಮೀಝಾ, ಜಿಲ್ಲಾ ಸಮಿತಿ ಸದಸ್ಯೆ ಫಾತಿಮಾ ಹಫೀಝಾ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News