ಅತ್ತಾವರ ಉಮಾಮಹೇಶ್ವರ ದೇವಾಲಯದಲ್ಲಿ ಕಳ್ಳತನ: ಲಕ್ಷಾಂತರ ರೂ.ಮೌಲ್ಯದ ಸೊತ್ತು ಕಳವು

Update: 2016-08-04 05:23 GMT

ಮಂಗಳೂರು, ಆ.4: ನಗರದ ಅತ್ತಾವರದಲ್ಲಿರುವ ಶ್ರೀ ಉಮಾಮಹೇಶ್ವರ ದೇವಾಲಯಕ್ಕೆ ನುಗ್ಗಿರುವ ಕಳ್ಳರು ಲಕ್ಷಾಂತರ ರೂ.ಮೌಲ್ಯದ ಸೊತ್ತುಗಳನ್ನು ದೋಚಿ ಪರಾರಿಯಾಗಿದ್ದಾರೆ.

ದೇವಾಲಯದ ಮುಂಬಾಗಿಲಿನ ಬೀಗ ಒಡೆದು ಒಳನುಗ್ಗಿರುವ ಕಳ್ಳರು ಸುಮಾರು ಎರಡು ಲಕ್ಷ ರೂ. ಮೌಲ್ಯದ ದೇವರ ಬೆಳ್ಳಿಯ ಕವಚ ಸಹಿತ ಲಕ್ಷಾಂತರ ರೂ. ಮೌಲ್ಯದ ಸೊತ್ತುಗಳನ್ನು ದೋಚಿದ್ದಾರೆ. ಕ್ಷೇತ್ರದ ಆವರಣದಲ್ಲಿ ಸಿಸಿಟಿವಿ ಕ್ಯಾಮರಾ ಅಳವಡಿಸಲಾಗಿದ್ದು, ಕ್ಯಾಮರಾಕ್ಕೆ ಬಟ್ಟೆಯನ್ನು ಮುಚ್ಚಿ ಕಳ್ಳರು ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.   

ಬೆಳಗ್ಗೆ ದೇವಾಲಯದ ಆವರಣದಲ್ಲಿ ಆಡಲೆಂದು ಬಂದ ಮಕ್ಕಳು ದೇವಾಲಯದ ಬಾಗಿಲು ಒಡೆದಿರುವುದನ್ನು ಕಂಡು ದೇವಾಲಯದ ಅರ್ಚಕರಿಗೆ ಮಾಹಿತಿ ನೀಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪಾಂಡೇಶ್ವರ ಠಾಣಾ ಪೊಲೀಸರ ನೇತೃತ್ವದಲ್ಲಿ ಶ್ವಾನದಳ ಆಗಮಿಸಿದ್ದು, ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News