ತೊಕ್ಕೊಟ್ಟು: ಎಸ್ಸೆಸ್ಸೆಫ್‌ನಿಂದ ಹಜ್ ತರಬೇತಿ ಶಿಬಿರ

Update: 2016-08-04 15:42 GMT

ಕೊಣಾಜೆ, ಆ.4: ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಆಶ್ರಯದಲ್ಲಿ ಪವಿತ್ರ ಹಜ್ ಯಾತ್ರೆ ಕೈಗೊಳ್ಳುವ ಉಳ್ಳಾಲದ ಯಾತ್ರಿಕರಿಗೆ ಬೀಳ್ಕೊಡುಗೆ ಸಮಾರಂಭ ಮತ್ತು ಹಜ್ ತರಬೇತಿ ಶಿಬಿರವು ಉಳ್ಳಾಲ ಪೇಟೆ ಸಮುದಾಯ ಭವನದಲ್ಲಿ ನಡೆಯಿತು.

ಎಸ್ಸೆಸ್ಸೆಫ್ ಉಳ್ಳಾಲ ಅಕ್ಕರೆಕೆರೆ ಮುಖಂಡ ಬಶೀರ್ ಸಖಾಫಿ ಉಳ್ಳಾಲ ದುಆ ನೆರವೇರಿಸಿದರು. ಎಸ್‌ವೈಎಸ್ ಉಳ್ಳಾಲ ಸೆಂಟರ್ ಅಧ್ಯಕ್ಷ ಬಶೀರ್ ಅಹ್ಸನಿ ತೋಡಾರ್ ಕಾರ್ಯಕ್ರಮ ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು, ಪವಿತ್ರ ಹಜ್ ಯಾತ್ರೆ ಪುಣ್ಯದಾಯಕವಾದ ಸತ್ಕರ್ಮವಾಗಿದ್ದು ಮುಸ್ಲಿಮನ ಮೂಲಭೂತ ಕಾರ್ಯಗಳಲ್ಲೊಂದಾಗಿದೆ ಎಂದರು.

ಎಸ್ಸೆಸ್ಸೆಫ್ ತೊಕ್ಕೋಟು ಸೆಕ್ಟರ್ ರಿಲೀಫ್ ಚೇರ್‌ಮ್ಯಾನ್ ಅಲ್ತಾಫ್ ಕುಂಪಲ ಮತ್ತು ಸುಲ್ತಾನ್ ಅಬೂಬಕರ್ ಮದನಿ ಮಾತನಾಡಿದರು.

ಬಳಿಕ ಪವಿತ್ರ ಹಜ್ ಯಾತ್ರೆಗೆ ತೆರಳುವ ತೊಕ್ಕೊಟ್ಟು ಹಿದಾಯ ಮಸೀದಿ ಸಮಿತಿ ಸದಸ್ಯ ರಝಾಕ್ ತೊಕ್ಕೊಟ್ಟು,ಉಳ್ಳಾಲ ಕೇಂದ್ರ ಜುಮಾ ಮಸೀದಿ ಸಿಬ್ಬಂದಿ ಅಬೂಬಕರ್ ಮದನಿ, ಉಳ್ಳಾಲ ದರ್ಗಾ ಮಾಜಿ ಸಮಿತಿ ಸದಸ್ಯ ಅಹ್ಮದ್ ಬಾವ, ಖಾದರ್ ಮಾರ್ಗತಲೆ, ಉಳ್ಳಾಲ ದರ್ಗಾ ಸಮಿತಿ ಸದಸ್ಯ ಹನೀಫ್ ಮಾರ್ಗತಲೆ, ಫಾರೂಕ್ ಮಾರ್ಗತಲೆ ಹಾಗೂ ಹೈದರ್ ಸುಂದರಿಬಾಗ್ ಇವರನ್ನು ಸನ್ಮಾನಿಸಲಾಯಿತು.

ಸೆಕ್ಟರ್ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಸೈಯದ್ ಖುಬೈಬ್ ತಂಙಳ್, ದ.ಕ. ಜಿಲ್ಲಾ ಕೋಶಾಧಿಕಾರಿ ಅಲ್ತಾಫ್ ಕುಂಪಲ ಹಾಗೂ ವಿದೇಶ ಯಾತ್ರೆ ಹೊರಡುತ್ತಿರುವ ಉಸ್ಮಾನ್ ಕೋಡಿ ಇವರನ್ನು ಸನ್ಮಾನಿಸಲಾಯಿತು.

ಉಳ್ಳಾಲ ದರ್ಗಾ ಸಮಿತಿ ಸದಸ್ಯರಾದ ತ್ವಾಹಿರ್ ಹಾಜಿ ಮುಕ್ಕಚ್ಚೇರಿ, ಅಬ್ದುಲ್ ಖಾದರ್ ಕೋಡಿ, ಅಬ್ದುಲ್ ಅಝೀಝ್ ಕೋಡಿ, ಎಸ್ವೈಎಸ್ ಅಳೇಕಲ ಬ್ರಾಂಚ್ ಅಧ್ಯಕ್ಷ ಸೈಯದ್ ಜಲಾಲುದ್ದೀನ್ ತಂಙಳ್, ಉಳ್ಳಾಲ ಅಲ್ ಅಮೀನ್ ರಿಲೀಫ್ ಫೌಂಡೇಶನ್ ಕಾರ್ಯದರ್ಶಿ ಅತೀಕ್ ಕೋಡಿ, ಸೆಕ್ಟರ್ ಕೋಶಾಧಿಕಾರಿ ಇಲ್ಯಾಸ್ ಕೈಕೋ, ರೀಡ್ಪ್ಲಸ್ ಪ್ರತಿನಿಧಿ ಹನೀಫ್ ಬೊಟ್ಟು, ಇಶಾರ ಕಾರ್ಯದರ್ಶಿ ಅಬ್ದುಲ್ ಘನಿ, ಮದೀನ ಇಸ್ಮಾಯಿಲ್, ಶಿಹಾಬ್ ಪೇಟೆ, ಎಸ್ವೈಎಸ್ ಮುಕ್ಕಚ್ಚೇರಿ ಬ್ರಾಂಚ್ ಕೋಶಾಧಿಕಾರಿ ಹೈದರ್ ಮುಕ್ಕಚ್ಚೇರಿ, ಎಸ್ಸೆಸ್ಸೆಫ್ ಕ್ಯಾಂಪಸ್ ಪ್ರಧಾನ ಕಾರ್ಯದರ್ಶಿ ನೌಫಲ್ ಕೋಟೆಪುರ, ಸೆಕ್ಟರ್ ಕಾರ್ಯದರ್ಶಿಗಳಾದ ಹಫೀಝ್ ಕೋಡಿ ಹಾಗೂ ತಾಜುದ್ದೀನ್ ಹಳೆಕೋಟೆ, ಮುಕ್ಕಚ್ಚೇರಿ ಮಸೀದಿ ಅಧ್ಯಕ್ಷ ಇಸ್ಮಾಯೀಲ್ ಹಾಗೂ ಯೂಸುಫ್ ಮಿಲ್ಲತ್ ಉಪಸ್ಥಿತರಿದ್ದರು.

ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಮುಝಮ್ಮಿಲ್ ಕೋಟೆಪುರ ಸ್ವಾಗತಿಸಿದರು. ಸೆಕ್ಟರ್ ಕಾರ್ಯದರ್ಶಿ ಸಿರಾಜ್ ಮೇಲಂಗಡಿ ಕಾರ್ಯಕ್ರಮ ನಿರೂಪಿಸಿದರು. ಸೆಕ್ಟರ್ ಉಪಾಧ್ಯಕ್ಷ ಮುಹಮ್ಮದ್ ಮದನಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News