×
Ad

ಅಂಗನವಾಡಿ ಕಟ್ಟಡ ಕಾಮಗಾರಿ ಕಳಪೆ: ದೂರು

Update: 2016-08-17 23:50 IST

ಪುತ್ತೂರು, ಆ.17: ತಾಲೂಕಿನ ಆರ್ಯಾಪು ಗ್ರಾಪಂ ವ್ಯಾಪ್ತಿಯ ಮಲಾರ್ ಎಂಬಲ್ಲಿ ನಿರ್ಮಾಣವಾಗು ತ್ತಿರುವ ಅಂಗನವಾಡಿ ಕಟ್ಟಡ ಕಾಮಗಾರಿ ಕಳಪೆ ಯಾಗಿದೆ ಎಂದು ಆರೋಪಿಸಿ ಕುರಿಯ ಗ್ರಾಮದ ಮಲಾರ್ ನಿವಾಸಿ ಪ್ರೀತಂ ಡಿಸೋಜ ಎಂಬವರು ಭ್ರಷ್ಟಾ ಚಾರ ನಿಗ್ರಹ ದಳದ ಪೊಲೀಸ್ ಉಪ ಅಧೀಕ್ಷಕರಿಗೆ ದೂರು ನೀಡಿದ್ದಾರೆ. ಮಲಾರ್ ಎಂಬಲ್ಲಿ ಎರಡು ಇಲಾಖೆಗಳ ಅನುದಾನದಲ್ಲಿ ನೂತನ ಅಂಗನವಾಡಿ ಕಟ್ಟಡ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಕಟ್ಟಡದ ಅಡಿ ಪಾಯ ಭದ್ರವಾಗಿಲ್ಲ. ಕಳಪೆ ಗುಣ ಮಟ್ಟದ ಕಲ್ಲು ಹಾಸಿ ಅಡಿ ಭಾಗವನ್ನು ಮಣ್ಣಿನಿಂದ ಮುಚ್ಚಲಾಗಿದೆ. ಅಂಗನವಾಡಿ ಮಕ್ಕಳ ಹಿತದೃಷ್ಟಿ ಯಿಂದ ಮತ್ತು ದೊಡ್ಡ ಮೊತ್ತದ ಸರಕಾರಿ ಅನುದಾನ ಇದಾಗಿರುವುದರಿಂದ ಈ ಕಳಪೆ ಗುಣಮಟ್ಟದ ಕಾಮಗಾರಿಗೆ ಆಕ್ಷೇಪವಿದ್ದು, ಈ ಕುರಿತು ತಾಪಂ ಕಾರ್ಯ ನಿರ್ವಹಣಾಧಿಕಾರಿಗಳಿಗೆ ದೂರು ಸಲ್ಲಿಸಿದ್ದರೂ ಈ ತನಕ ಯಾವುದೇ ಕ್ರಮಕೈಗೊಂಡಿಲ್ಲ. ಸಂಬಂಧಪಟ್ಟ ಇಂಜಿನಿಯರ್‌ಗೆ ವೌಖಿಕ ದೂರು ನೀಡಿದ್ದರೂ ಅವರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಅವರು ಆರೋಪಿಸಿದ್ದಾರೆ. ಆದ್ದರಿಂದ ಪ್ರಗತಿಯಲ್ಲಿರುವ ಈ ಕಳಪೆ ಕಾಮಗಾರಿಯನ್ನು ಸ್ಥಗಿತಗೊಳಿಸಿ ನ್ಯಾಯಬದ್ಧವಾಗಿ ಕಾಮಗಾರಿ ನಡೆಸಬೇಕು. ಕಳಪೆ ಕಾಮಗಾರಿಗೆ ಕಾರಣರಾದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಅವರು ದೂರಿನಲ್ಲಿ ಆಗ್ರಹಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News