ಸರಪಾಡಿ: ರಂಗಮಂದಿರಕ್ಕೆ ಶಿಲಾನ್ಯಾಸ

Update: 2016-08-20 15:52 GMT

ಬಂಟ್ವಾಳ, ಆ. 20: ಸರಪಾಡಿ ಪ್ರೌಢ ಶಾಲೆಯ ಎದುರು ಜಿ.ಪಂ.ನ ಲಕ್ಷ ರೂ. ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ರಂಗ ಮಂದಿರಕ್ಕೆ ರಾಜ್ಯ ಅರಣ್ಯ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಶನಿವಾರ ಶಿಲಾನ್ಯಾಸ ನೆರವೇರಿಸಿದರು.

ಈ ಸಂದಭರ್ದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪದ್ಮಶೇಖರ್ ಜೈನ್, ಬಂಟ್ವಾಳ ತಾಲೂಕು ಅಕ್ರಮ ಸಕ್ರಮ ಸಮಿತಿಯ ಅಧ್ಯಕ್ಷ ಮಾಯಿಲಪ್ಪಸಾಲಿಯಾನ್, ಬಂಟ್ವಾಳ ತಾಲೂಕು ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಸಂಪತ್ ಕುಮಾರ್ ಶೆಟ್ಟಿ, ಬೆಂಗಳೂರು ಉದ್ಯಮಿ ವಿಠಲ್ ಶೆಟ್ಟಿ, ತಾಪಂ ಮಾಜಿ ಉಪಾಧ್ಯಕ್ಷೆ ಕಾಂಚಲ, ಚಂದ್ರಹಾಸ ಹೊಳ್ಳರಗುತ್ತು, ಶಾಲಾಭಿವೃದ್ಧಿ ಸಮಿತಿ ಮಾಜಿ ಸದಸ್ಯೆ ಪ್ರಸಿಲ್ಲ, ಸರಪಾಡಿ ಗ್ರಾಪಂ ಸದಸ್ಯ ನಾಣ್ಯಪ್ಪ ಪೂಜಾರಿ, ನಿವೃತ್ತ ಕಾರ್ಯನಿರ್ವಾಹಣಾಧಿಕಾರಿ ರೋಬಾರ್ಟ್ ಮಾಸ್ಟರ್, ಸರಪಾಡಿ ಗ್ರಾಪಂ ಸದಸ್ಯೆ ಪ್ರೇಮ, ಊರಿನ ಮುಖಂಡ ಹಸನಬ್ಬ, ಶಾಲಾಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷ ಪದ್ಮನಾಭ ಪೂಜಾರಿ, ಸರಪಾಡಿ ಗ್ರಾಪಂ ಮಾಜಿ ಅಧ್ಯಕ್ಷ ಹಾಲಿ ಸದಸ್ಯ ಧನಂಜಯ ಶೆಟ್ಟಿ, ನಾಮ ನಿರ್ದೇಶಿತ ಸದಸ್ಯ ಲಿಯೋ ಫೆರ್ನಾಂಡೀಸ್, ಹಾಲು ಉತ್ಪಾದಕರ ಸಂಘದ ಸದಸ್ಯ ಜೊಕಿಂ ಪಿಂಟೋ ಮೊದಲಾದವರು ಉಪಸ್ಥಿತರಿದ್ದರು.

ಶಾಲೆಯ ಪ್ರಭಾರ ಮುಖ್ಯ ಶಿಕ್ಷಕ ಉದಯ ಕುಮಾರ್ ಜೈನ್ ಸ್ವಾಗತಿಸಿದರು. ಮಣಿನಾಲ್ಕೂರು ಗ್ರಾಪಂ ಸದಸ್ಯ ಆದಂ ಕುಂಞಿ ವಂದಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News