ಪಾಣೆಮಂಗಳೂರಿನಲ್ಲಿ ಸ್ವಚ್ಛ ಭಾರತ ಅಭಿಯಾನ

Update: 2016-08-22 15:27 GMT

ವಿಟ್ಲ,ಆ.22 : ಬಂಟ್ವಾಳ ಪುರಸಭೆ, ಲಯನ್ಸ್ ಮತ್ತು ಲಯನೆಸ್ ಕ್ಲಬ್ ಬಂಟ್ವಾಳ ಇದರ ವತಿಯಿಂದ ಸ್ವಚ್ಛ ಭಾರತ ಅಭಿಯಾನ ಕಾರ್ಯಕ್ರಮವು ಪಾಣೆಮಂಗಳೂರು ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯದ ಆವರಣದಲ್ಲಿ ಜರಗಿತು. ಸ್ಥಳೀಯ ಪುರಸಭಾ ಸದಸ್ಯೆ ಚಂಚಲಾಕ್ಷಿ, ಮುಖ್ಯಾಧಿಕಾರಿ ಬಿ.ಎಚ್. ಸುಧಾಕರ್, ಆರೋಗ್ಯಾಧಿಕಾರಿ ರತ್ನಪ್ರಸಾದ್, ಲಯನ್ಸ್ ಕ್ಲಬ್ ಅಧ್ಯಕ್ಷ ಲಕ್ಷ್ಮಣ ಕುಲಾಲ್, ಕಾರ್ಯದರ್ಶಿ ಉಮೇಶ್ ಆಚಾರ್, ಕೋಶಾಧಿಕಾರಿ ಶ್ರೀನಿವಾಸ ಪೂಜಾರಿ, ಲಯನೆಸ್ ಅಧ್ಯಕ್ಷೆ ದೇವಿಕಾ ದಾಮೋದರ್, ಕೋಶಾಧಿಕಾರಿ ವೃಂದಾ ಕುಡ್ವ, ಲಯನ್ಸ್ ಸದಸ್ಯರಾದ ಡಾ. ವಸಂತ್ ಬಾಳಿಗಾ, ಬಿ. ದಾಮೋದರ್, ಸತೀಶ್ ಕುಡ್ವ, ಮಧ್ವರಾಜ್ ಕಲ್ಮಾಡಿ, ಪುಷ್ಪರಾಜ್ ಶೆಟ್ಟಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News