×
Ad

ಸಕಾಲದಲ್ಲಿ ತೆರಿಗೆ ಸಂಗ್ರಹಿಸಿ ಅಭಿವೃದ್ಧಿಗೆ ಒತ್ತು ನೀಡಿ: ಜಿಲ್ಲಾಧಿಕಾರಿ

Update: 2016-08-24 22:16 IST

ಮಡಿಕೇರಿ ಆ.24 : ಪೌರಾ ಡಳಿತ ನಿರ್ದೇಶನದಂತೆ ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ಸಂಗ್ರಹಿಸಿ ನಗರ ಮತ್ತು ಪಟ್ಟಣ ಪ್ರದೇಶಗಳ ಅಭಿವೃದ್ಧಿಗೆ ಒತ್ತು ನೀಡುವುದರ ಜೊತೆಗೆ ಸಂಪನ್ಮೂಲ ಹೆಚ್ಚಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ವಿನ್ಸೆಂಟ್ ಡಿಸೋಜ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ನಗರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನಾ ಸಭೆೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ನಗರ ಮತ್ತು ಪಟ್ಟಣ ಸ್ಥಳೀಯ ಸಂಸ್ಥೆಗಳು ತೆರಿಗೆ ಸಂಗ್ರಹವು ಆಮೆಗತಿಯಲ್ಲಿ ನಡೆಯುತ್ತಿದೆ. ಸ್ಥಳೀಯ ಸಂಸ್ಥೆಗಳಲ್ಲಿ ತೆರಿಗೆ ಸಂಗ್ರಹಿಸಿ ಶೇಕಡವಾರು ಪ್ರಗತಿ ಸಾಧಿಸಿ ಅಭಿವೃದ್ಧಿಗೆ ಆದ್ಯತೆ ನೀಡುವಂತೆ ನಗರಸಭೆ ಮತ್ತು ಪಪಂಗಳ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿ      

ಸೋಜ ಅವರು ನಿರ್ದೇಶನ ನೀಡಿದರು. ಜಿಲ್ಲೆಯ ಮಡಿಕೇರಿ ನಗರಸಭೆೆ, ವೀರಾಜಪೇಟೆ, ಕುಶಾಲನಗರ, ಸೋಮವಾರಪೇಟೆ ಪಪಂಗಳಲ್ಲಿ ಉದ್ದಿಮೆ ಪರವಾನಿಗೆ, ಕುಡಿಯುವ ನೀರಿನ ತೆರಿಗೆ, ಜಾಹೀರಾತು ತೆರಿಗೆ, ವಾಣಿಜ್ಯ ಮಳಿಗೆ ಬಾಡಿಗೆ ಮತ್ತಿತರ ತೆರಿಗೆ ವಸೂಲಾತಿಯಲ್ಲಿ ಬಹಳ ಹಿಂೆ ಉಳಿದಿದ್ದು,

 ತೆರಿಗೆ ಸಂಗ್ರಹ ಮಾಡುವ ನಿಟ್ಟಿನಲ್ಲಿ ಆಯಾಯ ವ್ಯಾಪ್ತಿಯ ಸಿಬ್ಬಂದಿ ತಂಡೋಪಾದಿಯಾಗಿ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದರು. ತೆರಿಗೆ ಸಂಗ್ರಹದಲ್ಲಿ ನ್ಯೂನತೆಗಳನ್ನು ಸರಿಪಡಿಸಿಕೊಂಡು ಕಾಲಮಿತಿಯೊಳಗೆ ಬಾಕಿ ಇರುವ ತೆರಿಗೆಯನ್ನು ವಸೂಲಿ ಮಾಡಲು ಮುಂದಾಗಬೇಕು. ಗೃಹಭಾಗ್ಯ ಯೋಜನೆಯಡಿ ಪೌರಕಾರ್ಮಿಕರಿಗೆ ವಸತಿ ಸೌಲಭ್ಯ ಕಲ್ಪಿಸುವುದು, ನಗರಸಭೆ ಮತ್ತು ಪಪಂ ವ್ಯಾಪ್ತಿಯಲ್ಲಿ ಆಗಬೇಕಿರುವ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು. ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಸಂಬಂಧಿಸಿದಂತೆ ಕಾರ್ಯಕ್ರಮ ಅನುಷ್ಠಾನಗೊಳಿಸಲು ಮುಂದಾಗುವಂತೆ ಸೂಚನೆ ನೀಡಿದರು. ರಾಜೀವ್ ಗಾಂಧಿ ಗ್ರಾಮೀಣ ವಸತಿ ನಿಗಮ ವತಿಯಿಂದ ನಗರ ನಿವೇಶನ ಮತ್ತು ವಾಜಪೇಯಿ ವಸತಿ ಯೋಜನೆಯ ಪ್ರಗತಿ, ಬೀದಿ ದೀಪ ನಿರ್ವಹಣೆ, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಸರಕಾರಿ ಜಾಗ ಒತ್ತುವರಿ, ಘನ ತ್ಯಾಜ್ಯ ವಸ್ತು ನಿರ್ವಹಣೆ, ಬೀದಿ ವ್ಯಾಪಾರಿಗಳ ಸಮೀಕ್ಷೆ ಮತ್ತು ಗುರುತಿನ ಚೀಟಿ ವಿತರಿಸಿದ ಪೌರಾಯುಕ್ತರಾದ ಬಿ.ಬಿ.ಪುಷ್ಪಾವತಿ, ಪಪಂ ಮುಖ್ಯಾಧಿಕಾರಿಗಳಾದ ಕೃಷ್ಣ ಪ್ರಸಾದ್, ಕಿರಿಯ ಇಂಜಿನಿಯರ್ ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News