ಬಸ್ ಢಿಕ್ಕಿ ಹೊಡೆದು ಪಾದಚಾರಿ ಮೃತ್ಯು
Update: 2016-08-30 16:34 GMT
ಮಂಗಳೂರು, ಆ. 30: ನಗರದ ಎ.ಬಿ.ಶೆಟ್ಟಿ ವೃತ್ತದ ಬಳಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಅಪರಿಚಿತ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ಇಂದು ಸಂಜೆ ನಡೆದಿದೆ.
ನೆಹರೂ ಮೈದಾನದಿಂದ ಬಂದು ರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಬಸ್ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ. ಆದರೆ, ಈತನ ಹೆಸರು, ವಿಳಾಸದ ಬಗ್ಗೆ ವಿವರ ಲಭ್ಯವಾಗಿಲ್ಲ.
ಮಂಗಳೂರು ಪೂರ್ವ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.