ಫೇಸ್‌ಬುಕ್‌ನಲ್ಲಿ ಧಾರ್ಮಿಕ ಅವಹೇಳನಗೈದವರ ವಿರುದ್ಧ ಕ್ರಮಕ್ಕೆ ಮುಸ್ಲಿಮ್ ಲೇಖಕರ ಸಂಘ ಒತ್ತಾಯ

Update: 2016-09-01 14:38 GMT

ಮಂಗಳೂರು, ಸೆ.1: ಇತ್ತೀಚೆಗೆ ವಾಟ್ಸ್‌ಆಪ್ ಮತ್ತು ಫೇಸ್‌ಬುಕ್‌ನಲ್ಲಿ ಧಾರ್ಮಿಕ ಅವಹೇಳನಕಾರಿ ಬರಹಗಳನ್ನು ಪೋಸ್ಟ್ ಮಾಡಿರುವುದನ್ನು ಮುಸ್ಲಿಮ್ ಲೇಖಕರ ಸಂಘ ತೀವ್ರವಾಗಿ ಖಂಡಿಸಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಇಲಾಖೆಯು ಕೂಲಂಕುಶ ತನಿಖೆ ನಡೆಸಿ, ಅಪರಾಧಿಯ ಮೇಲೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವಂತೆ ಹಾಗೂ ಸೈಬರ್ ಕ್ರೈಂ ಬ್ರಾಂಚ್ ಸಾಮಾಜಿಕ ತಾಣಗಳಲ್ಲಿ ಹರಿದಾಡುವ ಅವಹೇಳನಕಾರಿ, ಪ್ರಚೋದನಕಾರಿ ಸಂದೇಶ, ಚಿತ್ರಗಳ ಬಗ್ಗೆ ನಿಗಾ ವಹಿಸಿ, ಸೂಕ್ತ ಸಮಯದಲ್ಲಿ ಕ್ರಮ ಕೈಗೊಳ್ಳುವುದರ ಮೂಲಕ ಸಾಮಾಜಿಕ ಸ್ವಾಸ್ಥ್ಯವನ್ನು ಕಾಪಾಡುವಲ್ಲಿ ಸಹಕರಿಸುವಂತೆ ನಗರ ಪೊಲೀಸ್ ಆಯುಕ್ತ ಎಂ. ಚಂದ್ರಶೇಖರ್‌ರಿಗೆ ಮುಸ್ಲಿಮ್ ಲೇಖಕರ ಸಂಘದ ನಿಯೋಗದ ಮೂಲಕ ಮನವಿ ನೀಡಲಾಯಿತು.

ನಿಯೋಗದಲ್ಲಿ ಮುಸ್ಲಿಮ್ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಎಚ್., ಜೊತೆ ಕಾರ್ಯದರ್ಶಿ ಮುಹಮ್ಮದ್ ಮುಹ್ಸಿನ್, ಸದಸ್ಯರಾದ ಬಿ. ಎ. ಸಲೀಮ್ ಬೋಳಂಗಡಿ ಮತ್ತು ಶಬ್ಬೀರ್ ಅಹ್ಮದ್ ಇದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News