ದ.ಕ.-ಉಡುಪಿ: ಇಂದು ಶಾಲಾ ಕಾಲೇಜುಗಳಿಗೆ ರಜೆ ಇಲ್ಲ

Update: 2016-09-01 18:43 GMT

ಮಂಗಳೂರು, ಸೆ.1: ದ.ಕ. ಜಿಲ್ಲೆಯಲ್ಲಿ ಸೆ.2ರಂದು ಶಾಲಾ ಕಾಲೇಜುಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಡಾ.ಕೆ.ಜಿ.ಜಗದೀಶ್ ತಿಳಿಸಿದ್ದಾರೆ.

ಕಾರ್ಮಿಕರ ಸಂಘಟನೆಗಳ ಸಾರ್ವತ್ರಿಕ ಮುಷ್ಕರ ಕರೆಯ ಹಿನ್ನೆಲೆಯಲ್ಲಿ ಈಗಾಗಲೇ ಪೊಲೀಸ್ ಆಯುಕ್ತರು ಮತ್ತು ಪೊಲೀಸ್ ವರಿಷ್ಠಾಧಿಕಾರಿ ಜತೆ ಮಾತು ಕತೆ ನಡೆಸಲಾಗಿದೆ. ಎಲ್ಲ ರೀತಿಯ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಬಂದ್ ಕರೆ ನೀಡಿರುವ ಸಂಘಟಕರಿಗೂ ಶಾಂತಿಯುತವಾಗಿ ಇರುವಂತೆ ಸೂಚಿಸಲಾಗಿದೆ ಎಂದವರು ತಿಳಿಸಿದ್ದಾರೆ.

ಉಡುಪಿ ವರದಿ: ಉಡುಪಿ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ಸೆ.2 ರಂದು ಅಧಿ ಕೃತವಾಗಿ ರಜೆ ಘೋಷಿಸಿಲ್ಲ. ಶಿಕ್ಷಣ ಸಂಸ್ಥೆಗಳು ಎಂದಿನಂತೆ ಕಾರ್ಯ ನಿರ್ವಹಿಸಲಿವೆ ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.
ಗ್ರಾಮೀಣ ಭಾಗದಲ್ಲಿರುವ ಸರಕಾರಿ ಶಾಲೆಗಳ ಮಕ್ಕಳು ಬಸ್‌ಗಳಲ್ಲಿ ಬರುವುದು ಅಪರೂಪವಾಗಿದ್ದು, ಹೆಚ್ಚಿನ ಖಾಸಗಿ ಶಾಲೆಗಳು ಸ್ವಂತ ಬಸ್‌ಗಳನ್ನು ಹೊಂದಿವೆ. ಹೀಗಾಗಿ ಅಲ್ಲಿ ಯಾವುದೇ ಸಮಸ್ಯೆ ಉಂಟಾಗದು ಎಂದಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News