ಟೌನ್‌ಹಾಲ್‌ನಿಂದ ಫ್ರೀಡಂ ಪಾರ್ಕ್ ತನಕ ಸಿಐಟಿಯು ನೇತೃತ್ವದಲ್ಲಿ ಕಾರ್ಮಿಕರ ಬೃಹತ್ ರ‍್ಯಾಲಿ

Update: 2016-09-02 06:10 GMT

ಬೆಂಗಳೂರು, ಸೆ.2:  ಕೇಂದ್ರದ ಕಾರ್ಮಿಕ ನೀತಿ ವಿರೋಧಿಸಿ ಕಾರ್ಮಿಕ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಹಿನ್ನೆಲೆಯಲ್ಲಿ ನಗರದ ಎಲ್ಲೆಡೆ ರ್ಯಾಲಿಗಳು ನಡೆಯುತ್ತಿದ್ದು, ವಿಧಾನ ಸೌಧ ಹಾಗೂ ವಿಕಾಸ ಸೌಧ ನೌಕರರಿಲ್ಲದೆ ಬಿಕೋ ಎನ್ನುತ್ತಿತ್ತು.
 ರಾಜಧಾನಿಯ ವಿವಿಧೆಡೆಯಿಂದ ಕಾರ್ಮಿಕರು ಸಿಐಟಿಯು ನೇತೃತ್ವದಲ್ಲಿ ಬೃಹತ್ ರ್ಯಾಲಿ ನಡೆಸಿ ಟೌನ್ ಹಾಲ್‌ನತ್ತ ಸಾಗುತ್ತಿದ್ದು, ಅಲ್ಲಿಂದ ಮೈಸೂರು ಬ್ಯಾಂಕ್ ಮಾರ್ಗವಾಗಿ ಫ್ರೀಡಂ ಪಾರ್ಕ್‌ಗೆ ತೆರಳಲಿದ್ದಾರೆ.
ಪೀಣ್ಯ 3ನೆ ಹಂತದಿಂದ ಟೌನ್‌ಹಾಲ್ ತನಕ ಬೃಹತ್ ರ್ಯಾಲಿ ನಡೆಸಿದ ಕಾರ್ಮಿಕರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು.
ನಗರದ ಪ್ರತಿಷ್ಠಿತ ಮೆಜೆಸ್ಟಿಕ್ ಪ್ರದೇಶ ಸೇರಿದಂತೆ ಎಲ್ಲೆಡೆ ಕಾರ್ಮಿಕರು ಪ್ರತಿಭಟನೆ ನಡೆಸಿದರು. ನಗರದ ವಿವಿಧೆಡೆಯಿಂದ ರ್ಯಾಲಿ ಮೂಲಕ ಆಗಮಿಸಿದ ಕಾರ್ಮಿಕರು ಟೌನ್‌ಹಾಲ್ ಬಳಿ ಜಮಾವಣೆ ಆಗುತ್ತಿದ್ದಾರೆ.
 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News