ಮಂಗಳೂರು ವಿ.ವಿ.ಗೆ ಸಚಿವ ಬಸವರಾಜ ರಾಯರೆಡ್ಡಿ ಭೇಟಿ
Update: 2016-09-02 12:11 GMT
ಕೊಣಾಜೆ, ಸೆ.2: ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ರಾಜ್ಯ ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯ ರೆಡ್ಡಿ ಶುಕ್ರವಾರ ಭೇಟಿ ನೀಡಿ ವಿವಿಯ ಅಧಿಕಾರಿಗಳೊಂದಿಗೆ ವಿವಿಧ ಅಭಿವೃದ್ದಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದರು.
ಮಂಗಳೂರು ವಿ.ವಿ.ಯ ಕುಲಪತಿ ಪ್ರೊ.ಕೆ.ಬೈರಪ್ಪ, ಶಾಸಕ ಜೆ.ಆರ್. ಲೋಬೊ, ಮಂಗಳೂರು ವಿವಿಯ ಕುಲಸಚಿವ ಪ್ರೊ.ಲೋಕೇಶ್, ಪರೀಕ್ಷಾಂಗ ಕುಲಸಚಿವ ಪ್ರೊ.ಎ.ಎಂ.ಖಾನ್, ಸಿಂಡಿಕೇಟ್ ಸದಸ್ಯರು ಹಾಗೂ ವಿವಿಯ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.
ನಂತರ ವಿವಿಯ ಕ್ಯಾಂಪಸ್ನಲ್ಲಿ ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಉನ್ನತ ಶಿಕ್ಷಣ ಸಚಿವರನ್ನು ಭೇಟಿ ಮಾಡಿ, ಮಂಗಳೂರು ವಿವಿಯಲ್ಲಿ ಮೊಬೈಲ್ ಕ್ಯಾಮರಾ ಬಳಸಿ ಶೌಚಾಲಯದೊಳಗೆ ರೆಕಾರ್ಡಿಂಗ್ ಮಾಡಿದ ಘಟನೆಗೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆಯನ್ನು ನಡೆಸಿ ಆದಷ್ಟು ಶೀಘ್ರವಾಗಿ ಆರೋಪಿಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳುವಂತೆ ಮನವಿ ನೀಡಿದರು.