ಬಸ್ ಮೇಲೆ ಬಿದ್ದ ಬೃಹತ್ ಮರ; ಪಾರಾದ ಪ್ರಯಾಣಿಕರು

Update: 2016-09-03 18:21 GMT

ಬೆಂಗಳೂರು, ಸೆ.3: ಶಿರಡಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಮೇಲೆ ಬೃಹತ್ ಮರವೊಂದು ಉರುಳಿಬಿದ್ದು, ಪ್ರಯಾಣಿಕರು ಸ್ವಲ್ಪದರಲ್ಲೇ ಪಾರಾದ ಘಟನೆ ನಗರದ ಮಲ್ಲೇಶ್ವರಂನಲ್ಲಿ ನಡೆದಿದೆ.
  ಶುಕ್ರವಾರ ಮಧ್ಯಾಹ್ನ ಶಿರಡಿಯಿಂದ ಹೊರಟಿದ್ದ ಕೆಎಸ್ಸಾರ್ಟಿಸಿಯ ಐರಾವತ ಬಸ್‌ನಲ್ಲಿ 26 ಪ್ರಯಾಣಿಕರಿದ್ದರು. ಇಂದು ಮುಂಜಾನೆ ಮಲ್ಲೇಶ್ವರಂನ 11ನೆ ಕ್ರಾಸ್ ಬಳಿ ಬರುತ್ತಿದ್ದಂತೆ ರಸ್ತೆ ಬದಿಯ ಬೃಹದಾಕಾರದ ಮರ ಬಸ್‌ಮೇಲೆ ಉರುಳಿ ಬಿತ್ತು. ಪರಿಣಾಮ ಬಸ್‌ನ ಗಾಜುಗಳು ಪುಡಿಪುಡಿಯಾದವು. ಆದರೆ, ಬಸ್‌ನಲ್ಲಿದ್ದ ಪ್ರಯಾಣಿಕರು ಯಾವುದೇ ಪ್ರಾಣಾಪಾಯವಿಲ್ಲದೆ ಪಾರಾಗಿದ್ದಾರೆ.
ಘಟನೆ ಕುರಿತು ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ರಸ್ತೆ ಮಧ್ಯೆ ಬಿದಿದ್ದ ಮರವನ್ನು ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಘಟನೆಯಲ್ಲಿ ಒಂದು ಸ್ಕಾರ್ಪಿಯೊ ಕಾರು ಮತ್ತು ಆಟೊ ಜಖಂಗೊಂಡಿದೆ ಎಂದು ಮಲ್ಲೇಶ್ವರಂ ಠಾಣೆಯ ಪೊಲೀಸರು ಮಾಹಿತಿ ನೀಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News