ಸಿದ್ಧಕಟ್ಟೆಯಲ್ಲಿ ಜುಗಾರಿ ಅಡ್ಡೆಗೆ ದಾಳಿ: 9 ಮಂದಿಯ ಬಂಧನ

Update: 2016-09-05 08:19 GMT

ಬಂಟ್ವಾಳ, ಸೆ.5: ತಾಲೂಕಿನ ಸಿದ್ಧಕಟ್ಟೆಯ ಕರ್ಪೆ ಎಂಬಲ್ಲಿ ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ದಾಳಿ ನಡೆಸಿದ ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರು, ಜುಗಾರಿಯಲ್ಲಿ ತೊಡಗಿದ್ದ 9 ಮಂದಿಯನ್ನು ಬಂಧಿಸಿ ನಗದು, ಮೊಬೈಲ್ ಫೋನ್‌ಗಳ ಹಾಗೂ ವಾಹನಗಳನ್ನು ವಶಪಡಿಸಿಕೊಂಡಿರುವ ಘಟನೆ ರವಿವಾರ ರಾತ್ರಿ ನಡೆದಿದೆ. ಕರ್ಪೆಯಲ್ಲಿ ಜುಗಾರಿ ಆಟ ನಡೆಯುತ್ತಿದ್ದ ಬಗ್ಗೆ ಖಚಿತ ವರ್ತಮಾನ ಲಭಿಸಿದ ಮೇರೆಗೆ ದಾಳಿ ನಡೆಸಿ ಪೊಲೀಸರು ಜುಗಾರಿಯಲ್ಲಿ ತೊಡಗಿದ್ದ 9 ಮಂದಿಯನ್ನು ಬಂಧಿಸಿದ್ದಾರೆ. ಅಲ್ಲದೆ ಆಟಕ್ಕೆ ಬಳಸಿದ್ದ 6,600 ರೂ. ನಗದನ್ನು ಹಾಗೂ ಸ್ಥಳದಲ್ಲಿದ್ದ 1 ಕಾರು, 1 ಆಟೊ ರಿಕ್ಷಾ, 4 ಮೊಬೈಲ್ ಫೋನ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ಬಂಟ್ವಾಳ ಗ್ರಾಮಾಂತರ ಠಾಣೆಯ ಎಸ್ಸೈ ಎ.ಕೆ.ರಕ್ಷಿತ್ ಗೌಡ ಹಾಗೂ ಡಿ.ಎಸ್.ಐ.ಬಿ. ಅಮಾನುಲ್ಲಾ ಖಾನ್ ನೇತೃತ್ವದಲ್ಲಿ ನಡೆದ ಈ ದಾಳಿಯಲ್ಲಿ ಠಾಣೆಯ ಸಿಬ್ಬಂದಿ ಭಾಗವಹಿಸಿದ್ದರು. ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು, ಮುಂದಿನ ಕ್ರಮ ಕೈಗೊಂಡಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News