ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ
Update: 2016-09-09 06:02 GMT
ಮಂಗಳೂರು, ಸೆ.9: ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸಲು ಆದೇಶಿಸಿ ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಇಂದು ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣ ಗೌಡ ಬಣದಿಂದ ದ.ಕ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಅನಿಲ್ ದಾಸ್, ವಕೀಲ ನಾರಿಮನ್ ಅವರನ್ನು ಬದಲಾಯಿಸಬೇಕು, ಈ ಬಗ್ಗೆ ವೈಜ್ಞಾನಿಕ ಅಧ್ಯಯನ ನಡೆಸಬೇಕು. ರಾಜಕೀಯ ನಾಯಕರುಗಳಿಂದ ರಾಜ್ಯಕ್ಕೆ ಇಂತಹ ಪರಿಸ್ಥಿತಿ ಬಂದಿದೆ. ಇದನ್ನು ಒಗ್ಗಟ್ಟಾಗಿ ಎದುರಿಸಬೇಕು ಎಂದರು.
ಪ್ರತಿಭಟನಾ ಸಭೆಗೂ ಮುನ್ನ ಪ್ರತಿಭಟನಾಕಾರರು ಜ್ಯೋತಿ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಬೈಕ್ ರ್ಯಾಲಿ ನಡೆಸಿದರು.
ಪ್ರತಿಭಟನೆಯ ನೇತೃತ್ವವನ್ನು ರಾಜೇಶ್, ಎ.ಕೆ.ಜಮಾಲ್, ಅರುಣ್ ಕುಮರ್, ನವಾಝ್, ಆಕಾಶ್ , ರಿಯಾಝ್ ಹರೇಕಳ, ಸಂತೋಷ್ ಮೊದಲಾದವರು ವಹಿಸಿದ್ದರು.