ಸೆ.16: 'ಆಳ್ವಾಸ್ ವಿದ್ಯಾರ್ಥಿಸಿರಿ' ಅಧ್ಯಕ್ಷರ ಆಯ್ಕೆ
ಮೂಡುಬಿದಿರೆ, ಸೆ.11: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ಆಯೋಜಿ ಸುತ್ತಿರುವ 'ಆಳ್ವಾಸ್ ವಿದ್ಯಾರ್ಥಿಸಿರಿ 2016' ವಿದ್ಯಾರ್ಥಿ ಸಾಹಿತ್ಯ ಸಂಸ್ಕೃತಿ ಸಮ್ಮೇಳನವು ನವೆಂಬರ್ ತಿಂಗಳಲ್ಲಿ ವಿದ್ಯಾಗಿರಿಯಲ್ಲಿ ಜರಗಲಿದೆ. ಈ ಸಮ್ಮೇಳನದ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆಯು ಸೆ.16ರಂದು ಬೆಳಗ್ಗೆ 10ರಿಂದ ವಿದ್ಯಾಗಿರಿಯ ಆಳ್ವಾಸ್ ಕ್ಯಾಂಪಸ್ನ ಸೆಮಿನಾರ್ ಹಾಲ್ನಲ್ಲಿ ನಡೆಯಲಿದೆ.
ಭಾಷಣ, ಸಾಹಿತ್ಯ, ಸಾಂಸ್ಕೃತಿಕ ಮೊದಲಾದ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಈ ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸ ಬಹುದಾಗಿದೆ. ಕಾಸರಗೋಡು, ಉಡುಪಿ ಮತ್ತು ದ.ಕ. ಜಿಲ್ಲಾ ವ್ಯಾಪ್ತಿಯ ಹೈಸ್ಕೂಲ್ ಮತ್ತು ಪದವಿ ಪೂರ್ವ ವಿದ್ಯಾರ್ಥಿಗಳು ತಾವು ಕಲಿಯುತ್ತಿರುವ ಸಂಸ್ಥೆಯ ಮುಖ್ಯಸ್ಥರ ದೃಢೀಕರಣ ಪತ್ರ, ಸ್ವಪರಿಚಯದ ವಿವರ ಹಾಗೂ ಪಡೆದ ಪ್ರಮಾಣ ಪತ್ರಗಳ ಜೊತೆಗೆ ಹಾಜರಿರಬೇಕು.
ಆಯ್ಕೆ ಪ್ರಕ್ರಿಯೆಯು ಲಿಖಿತ ಪರೀಕ್ಷೆ, ಆಶು ಭಾಷಣ ಹಾಗೂ ಸಂದರ್ಶನಗಳನ್ನು ಒಳಗೊಂಡಿರುತ್ತದೆ. ಇದೇ ಸಂದರ್ಭ ಸಮ್ಮೇಳನದ ಸಮಾ ರೋಪ ಭಾಷಣ ಮಾಡುವವರನ್ನು ಆಯ್ಕೆ ಮಾಡಲಾಗುವುದು. ಆಯ್ಕೆ ಪ್ರಕ್ರಿಯೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿ ಗಳಲ್ಲಿ ಅರ್ಹರಿಗೆ ಸಮ್ಮೇಳನದಲ್ಲಿ ಅವಕಾಶಗಳನ್ನು ನೀಡಲಾಗುವುದು.
ವಿಶಿಷ್ಟ ವೈಯಕ್ತಿಕ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೂ ಸಮ್ಮೇಳನದಲ್ಲಿ ಭಾಗವಹಿಸಲು ಅವಕಾಶವಿದ್ದು ಅವರು ತಮ್ಮ ಸ್ವವಿವರವನ್ನು ಅಧ್ಯಕ್ಷರು, ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ, ಮೂಡುಬಿದಿರೆ-574227 ಈ ವಿಳಾಸಕ್ಕೆ ಕಳುಹಿಸಿಕೊಡಬಹುದಾಗಿದೆ. ಹೆಚ್ಚಿನ ವಿವರಗಳಿಗೆ 9481326858 ಸಂಖ್ಯೆಯನ್ನು ಸಂಪರ್ಕಿಸಬಹುದಾಗಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ.ಎಂ.ಮೋಹನ ಆಳ್ವ ತಿಳಿಸಿದ್ದಾರೆ.