ರಾಜ್ಯಕ್ಕೆ ಅನ್ಯಾಯವಾಗಿದೆ; ಕೇಂದ್ರ ಸರಕಾರ ಮಧ್ಯಪ್ರವೇಶಿಸಬೇಕು: ಸಿಎಂ ಸಿದ್ದರಾಮಯ್ಯ

Update: 2016-09-12 09:10 GMT

ಬೆಂಗಳೂರು, ಸೆ.12: ಕಾವೇರಿ ನದಿ ನೀರು ಹಂಚಿಕೆ ಕುರಿತು ಸಲ್ಲಿಸಲಾಗಿದ್ದ ಮರುಪರಿಶೀಲನಾ ಅರ್ಜಿಯ ಕುರಿತ ಸುಪ್ರೀಂ ತೀರ್ಪಿನಿಂದ ರಾಜ್ಯಕ್ಕೆ ಅನ್ಯಾಯ ಆಗಿದ್ದು, ಈ ಬಗ್ಗೆ ಕೇಂದ್ರ ಸರಕಾರ ಮಧ್ಯಪ್ರವೇಶ ಮಾಡಬೇಕು. ತಮಿಳುನಾಡಿನಲ್ಲಿರುವ ಕನ್ನಡಿಗರ ರಕ್ಷಣೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ತಮಿಳುನಾಡಿನಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ ಎಸಗಲಾಗುತ್ತಿದೆ. ಇದನ್ನು ನಿಯಂತ್ರಿಸದೇ ಇದಲ್ಲಿ ಪರಿಣಾಮ ಬೇರೆಯಾಗುತ್ತದೆ. ಈ ಸಂಬಂಧ ಕೇಂದ್ರಕ್ಕೆ ಹಾಗೂ ತಮಿಳುನಾಡು ಸಿಎಂಗೆ ಪತ್ರ ಬರೆಯುತ್ತೇನೆ ಎಂದು ಹೇಳಿದರು.

ಸುಪ್ರೀಂ ಕೋರ್ಟ್ ನಿರ್ದೇಶನದ ಬಗ್ಗೆ ನಮ್ಮ ವಕೀಲರೊಂದಿಗೆ ಮಾತನಾಡಿದ ಬಳಿಕ  ಪ್ರತಿಕ್ರಿಯಿಸುತ್ತೇನೆ. ನ್ನಡ ಪರ ಸಂಘಟನೆಗಳು ಸಂಯಮದಿಂದ ವಹಿಸಬೇಕು. ಕಾನೂನು ಸುವ್ಯವಸ್ಥೆ ಕಾಪಾಡಲು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News