ತೊಕ್ಕೊಟ್ಟು: ಮಸ್ಜಿದುಲ್ ಹುದಾ ಮಸೀದಿಯಲ್ಲಿ ಸಾಮೂಹಿಕ ಪ್ರಾರ್ಥನೆ
Update: 2016-09-12 11:48 GMT
ಉಳ್ಳಾಲ, ಸೆ.12: ತೊಕ್ಕೊಟ್ಟಿನ ಮಸ್ಜಿದುಲ್ ಹುದಾ ಮಸೀದಿಯಲ್ಲಿ ಬಕ್ರೀದ್ ಹಬ್ಬದ ಪ್ರಯುಕ್ತ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ನೆರವೇರಿಸಿದರು.
ಪ್ರಾರ್ಥನೆ ನಡೆದ ಬಳಿಕ ಮಂಗಳೂರು ಶಾಂತಿ ಪ್ರಕಾಶನದ ವ್ಯವಸ್ಥಾಪಕ ಮುಹಮ್ಮದ್ ಕುಂಞಿ ಸಂದೇಶ ನೀಡಿದರು.
ಯುವಕರು ಸಂಯಮ ಮತ್ತು ವಿವೇಚನೆಯನ್ನು ಬೆಳೆಸಿಕೊಂಡು ದುಷ್ಟರ ಸಂಘಗಳಿಂದ ದೂರ ಉಳಿಯುವಂತೆ ಕರೆ ನೀಡಿದರು. ಇಸ್ಲಾಂನ್ನು ಪ್ರತಿಪಾದಿಸುವ ಯುವಕರು ಜಾಗರೂಕತೆಯಿಂದ ಹೆಜ್ಜೆ ಇಡುವ ಅನಿವಾರ್ಯತೆ ಬಂದೊದಗಿದೆ. ಹಬ್ಬಗಳ ಆಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸುವುದರೊಂದಿಗೆ ಸಮಾಜದಲ್ಲಿರುವ ಅಶಕ್ತರಿಗೆ ಸಹಾಯ ಹಸ್ತ ಚಾಚುವಂತೆ ಮನವಿ ಮಾಡಿದರು.