ಶಾಂತಿ ಕಾಪಾಡಿ: ವೆಂಕಯ್ಯ ನಾಯ್ಡು ಕರೆ
Update: 2016-09-13 11:10 IST
ಹೊಸದಿಲ್ಲಿ, ಸೆ.13: ಕಾವೇರಿ ನದಿ ನೀರು ಹಂಚಿಕೆಯ ಹಿನ್ನೆಲೆಯಲ್ಲಿ ಭುಗಿಲೆದ್ದಿರುವ ಹಿಂಸಾಚಾರಕ್ಕೆ ಸಂಬಂಧಿಸಿ ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಇಂದು ಪತ್ರಿಕಾಗೋಷ್ಠಿಯಲ್ಲಿ ಶಾಂತಿ ಕಾಪಾಡುವಂತೆ ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಜನತೆಗೆ ಮನವಿ ಮಾಡಿದ್ದಾರೆ.
ಅವರ ಸುದ್ದಿಗೋಷ್ಠಿಯ ಹೈಲೈಟ್ಸ್
*ಪ್ರತಿಭಟನೆ ಹೆಸರಲ್ಲಿ ಹಿಂಸಾಚಾರವನ್ನು ಸಹಿಸಲು ಸಾಧ್ಯವಿಲ್ಲ. ಹಿಂಸೆಯಿಂದ ಯಾವುದೇ ಪ್ರಯೋಜನವಿಲ್ಲ.
*ಯಾವುದೇ ಬಗೆಯ ವಿವಾದವನ್ನು ರಸ್ತೆಯಲ್ಲಿ ಬಗೆಹರಿಸಲು ಸಾಧ್ಯವಿಲ್ಲ.
*ಬೇರೆ ರಾಜ್ಯಗಳ ಜನರಿಗೆ ರಕ್ಷಣೆ ನೀಡಬೇಕು
*ಹಿಂಸಾಚಾರದಿಂದ ಜನಸಾಮಾನ್ಯರಿಗೆ ತೊಂದರೆಯಾಗುತ್ತಿದೆ.
*ಹಿಂಸೆಯನ್ನು ವೈಭವಿಕರಿಸದಂತೆ ಟಿವಿ ಮಾಧ್ಯಮಗಳಿಗೆ ಕರೆ.
*ಕಾವೇರಿ ವಿಚಾರದಲ್ಲಿ ಕೋರ್ಟ್ ಆದೇಶವನ್ನು ಎಲ್ಲರೂ ಪಾಲಿಸಬೇಕು.
*ಯಾರೂ ಹಿಂಸೆಯನ್ನು ಪ್ರಚೋದಿಸುವ ಕೆಲಸ ಮಾಡಬಾರದು.