ತಮಿಳುನಾಡು ಮೂಲದ ಕಂಪೆನಿ ವಿರುದ್ಧ ಪ್ರತಿಭಟನೆ: ವಂದೇಮಾತರಂ ಸಂಘಟನೆ ಕಾರ್ಯಕರ್ತರು ವಶಕ್ಕೆ

Update: 2016-09-13 08:18 GMT

ಬೆಂಗಳೂರು, ಸೆ.13: ಬಿಡಿಎ ವತಿಯಿಂದ ನಿರ್ಮಿಸುತ್ತಿರುವ ಅಪಾರ್ಟ್ ಮೆಂಟ್ ನಿರ್ಮಾಣದ ಗುತ್ತಿಗೆಯನ್ನು ತಮಿಳುನಾಡು ಮೂಲದ ರಾಮಲಿಂಗಂಮ್ ಕನ್ಷ್ರಕ್ಷನ್  ಕಂಪೆನಿಗೆ ನೀಡಿದ್ದನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ವಂದೇಮಾತರಂ ಸಂಘಟನೆಯಿಂದ ನಗರದ ಹೊರವಲಯ ದೊಡ್ಡಬನಹಳ್ಳಿ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯ ವೇಳೆ  ಸಂಸ್ಥೆಯ ನಾಮಫಲಕಕ್ಕೆ ಕಪ್ಪು ಬಣ್ಣ ಬಳಿದ ಕಾರ್ಯಕರ್ತರು ಗೇಟ್ ನ ಒಳನುಗ್ಗಲು ಯತ್ನಿಸಿದರು.

ಈ ವೇಳೆ ಸ್ಥಳಕ್ಕಾಗಮಿಸಿದ ಕಾಡುಗೋಡಿ ಪೊಲೀಸರು ವಂದೇಮಾತರಂ ಸಂಘಟನೆಯ ಅಧ್ಯಕ್ಷ ದೇವರಾಜ್, ಉಪಾಧ್ಯಕ್ಷ ಹರಿಪ್ರಸಾದ್ ನಾಯ್ಕ್ ಸೇರಿದಂತೆ ಹಲವು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News