ಬೈಕ್ನಲ್ಲಿ ಬಂದು ಪಾದಚಾರಿ ಮಹಿಳೆಯ ಸರ ಎಗರಿಸಿದ ದುಷ್ಕರ್ಮಿಗಳು
Update: 2016-09-14 13:58 GMT
ಬಂಟ್ವಾಳ, ಸೆ. 14: ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೋರ್ವಳ ಕತ್ತಿನಲ್ಲಿದ್ದ ಚಿನ್ನದ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ತಾಲೂಕಿನ ಸಿದ್ಧಕಟ್ಟೆ ಎಂಬಲ್ಲಿನ ಕೋರಿಯಾರ್ ಎಂಬಲ್ಲಿ ಬುಧವಾರ ಸಂಜೆ ನಡೆದಿದೆ.
ಇಲ್ಲಿನ ನಿವಾಸಿ ಸಂಜೀವ ಪೂಜಾರಿ ಎಂಬವರ ಪತ್ನಿ ವಾರಿಜ ಎಂಬವರು ಇಂದು ಸಂಜೆ ಮನೆ ಸಮೀಪದಲ್ಲಿರುವ ಡೈರಿಗೆ ದನದ ಹಾಲು ಕೊಡಲೆಂದು ರಸ್ತೆ ನಡೆದುಕೊಂಡು ಹೋಗುತ್ತಿದ್ದ ಸಂದರ್ದಲ್ಲಿ ಈ ಘಟನೆ ನಡೆದಿದೆ.
ಅವರ ಕತ್ತಿನಲ್ಲಿದ್ದ ಮೂರುವರೆ ಪವನ್ ತೂಕದ ಚಿನ್ನದ ಕರಿಮಣಿಯ ಸರವನ್ನು ಹೆಲ್ಮೇಟ್ ಧರಿಸಿ ಬೈಕ್ನಲ್ಲಿ ಬಂದ ಇಬ್ಬರು ಅಪರಿಚಿತರು ಎಳೆದು ಪರಾರಿಯಾಗಿದ್ದಾರೆ. ಈ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.