ಮರ್ಧಾಳ: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆ
Update: 2016-09-16 05:57 GMT
ಕಡಬ, ಸೆ.16. ವ್ಯಕ್ತಿಯೋರ್ವರು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ಸಮೀಪದ 102 ನೆಕ್ಕಿಲಾಡಿ ಗ್ರಾಮದ ನಿಂತಿಕಲ್ಲು ಎಂಬಲ್ಲಿ ಸಂಭವಿಸಿದೆ.
ಇಲ್ಲಿನ ನಿವಾಸಿ ಮಹಾಲಿಂಗ ಎಂಬವರ ಪುತ್ರ ರಾಮ ಎಂಬವರು ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ತನ್ನ ಮನೆಯ ಬಚ್ಚಲು ಕೋಣೆಯ ಪಕ್ಕಾಸಿಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗುರುವಾರ ರಾತ್ರಿ ಆತ್ಮಹತ್ಯೆಗೈದಿರಬಹುದೆಂದು ಸಂಶಯಿಸಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ
ಕಡಬ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.