×
Ad

ನಿಡ್ಲೆ: ಬೈಕ್‌ಗೆ ಕಾರು ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

Update: 2016-09-18 20:10 IST

ಬೆಳ್ತಂಗಡಿ, ಸೆ.18:ನಿಡ್ಲೆ ಸಮೀಪ ಬೈಕ್ ಹಾಗೂ ಕಾರು ಪರಸ್ಪರ ಢಿಕ್ಕಿ ಹೊಡೆದು ಬೈಕ್ ಸವಾರನೋರ್ವ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ರವಿವಾರ ಸಂಜೆ ಸಂಭವಿಸಿದೆ.

ಮೃತ ಯುವಕ ಬೆಂಗಳೂರು ನಿವಾಸಿ ಗಣೇಶ(27) ಎಂಬವರಾಗಿದ್ದಾರೆ.

ಇವರು ತನ್ನ ಗೆಳೆಯನೊಂದಿಗೆ ಬೈಕಿನಲ್ಲಿ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದು ಹಿಂತಿರುಗುತ್ತಿದ್ದರು. ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಕಾರು ನಿಡ್ಲೆ ಸಮೀಪ ಬೈಕಿಗೆ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಬೈಕ್‌ನಲ್ಲಿದ್ದ ಗಣೇಶ ಸ್ಥಳದಲ್ಲಿಯೇ ಮೃತಪಟ್ಟರೆ ಇವರೊಂದಿಗೆ ಪ್ರಯಾಣಿಸುತ್ತಿದ್ದ ದಯಾನಂದ ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಆಸ್ಪತ್ರೆಗೆ ಸೇರಿಸಲಾಗಿದೆ.

ಧರ್ಮಸ್ಥಳ ಪೊಲೀಸರು ಘಟನಾಸ್ಥಳಕ್ಕೆ ತೆರಳಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News