ಸೆ.29,30ರಂದು ವಿವಿ ಕುಲಪತಿಗಳ ಶೃಂಗಸಭೆ: ಸಚಿವ ಬಸವರಾಜ ರಾಯರೆಡ್ಡಿ

Update: 2016-09-19 11:39 GMT

ಮಂಗಳೂರು, ಸೆ.19: ವಿಶ್ವವಿದ್ಯಾನಿಲಯಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡುವ ಬಗ್ಗೆ ಚರ್ಚಿಸಲು ಸೆ.29 ಮತ್ತು 30ರಂದು ಬೆಂಗಳೂರಿನಲ್ಲಿ ವಿವಿ ಕುಲಪತಿಗಳ ಶೃಂಗಸಭೆ ಆಯೋಜಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಬಸವರಾಜ ರಾಯರೆಡ್ಡಿ ತಿಳಿಸಿದ್ದಾರೆ.

ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಹೆಚ್ಚು ವಿದ್ಯಾರ್ಥಿಗಳನ್ನು ಪದವಿ ಮತ್ತು ಉನ್ನತ ಶಿಕ್ಷಣಕ್ಕೆ ಆಕರ್ಷಿಸಲು ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಲಾಗುವುದು ಎಂದರು.

ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ಇರುವ ಪ್ರತ್ಯೇಕ ಕಾಯ್ದೆಯ ಬದಲಿಗೆ ರಾಜ್ಯದ ಎಲ್ಲಾ ವಿಶ್ವವಿದ್ಯಾನಿಲಯಗಳಿಗೆ ಅನ್ಬಯವಾಗುವಂತೆ ವಿ.ವಿ. ಸಮಗ್ರ ಕಾಯ್ದೆ  ತರಲಾಗುವುದು. ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ತಿಳಿಸಿದರು‌‌‌‌

ವಿಶ್ವವಿದ್ಯಾನಿಲಯ ಉಪನ್ಯಾಸಕ ಮತ್ತು ಸಿಬ್ಬಂದಿ ನೇಮಕ ಸಂಬಂಧಿಸಿ ವಿ.ವಿ. ನೇಮಕಾತಿ ಆಯೋಗವನ್ನು ರಚಿಸುವ ಚಿಂತನೆ ಸರಕಾರದ ಮುಂದಿದೆ ಎಂದು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News