ಬೆಂಗಳೂರಿನಲ್ಲಿ ಹೈ ಅಲರ್ಟ್, ಸಿಎಂ ನಿವಾಸಕ್ಕೆ ಬಿಗಿ ಭದ್ರತೆ

Update: 2016-09-20 04:52 GMT

ಬೆಂಗಳೂರು, ಸೆ.20: ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಸುಪ್ರೀಂಕೋರ್ಟ್‌ನಲ್ಲಿ ಮಂಗಳವಾರ ವಿಚಾರಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಿಎಂ ನಿವಾಸ ಸೇರಿದಂತೆ ಬೆಂಗಳೂರಿನಾದ್ಯಂತ ಪೊಲೀಸರ ಬಿಗಿ ಭದ್ರತೆ ನಿಯೋಜಿಸಲಾಗಿದೆ.

ಸಿಎಂ ಅಧಿಕೃತ ನಿವಾಸ ಕಾವೇರಿ ಹಾಗೂ ಗೃಹ ಕಚೇರಿ ಕೃಷ್ಣಾದಲ್ಲಿ ಹೆಚ್ಚುವರಿ ಬ್ಯಾರಿಕೇಡ್ ಅಳವಡಿಸಿ ಬಿಗಿ ಭದ್ರತೆ ಒದಗಿಸಲಾಗಿದೆ.

ಬೆಂಗಳೂರಿನ ಸೂಕ್ಷ್ಮ ಪ್ರದೇಶದಲ್ಲಿ ಪೊಲೀಸರ ಸರ್ಪಗಾವಲಿದ್ದು, ಹೈ-ಅಲರ್ಟ್ ಘೋಷಿಸಲಾಗಿದೆ. 16,000 ಕ್ಕೂ ಅಧಿಕ ಪೊಲೀಸರು, 3 ಸಾವಿರ ಆರ್‌ಪಿಎಫ್, ಕೆಎಸ್‌ಆರ್‌ಪಿ ಹಾಗೂ ಹೋಂಗಾರ್ಡ್‌ಗಳನ್ನು ಭದ್ರತೆಗೆ ನಿಯೋಜಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News